28.3 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

ವೇಣೂರು: ಎಸ್.ಎಸ್.ಎಲ್.ಸಿ ಎಂಬುದು ಶಿಕ್ಷಣದ ಪ್ರಮುಖ. ಹಂತ. ಪಿ.ಯು.ಸಿ ಶಿಕ್ಷಣದ ಹಂತದಲ್ಲಿ ಬರುವ ಬಹು ಬಗೆಯ ಸ್ಪರ್ಧಾತ್ಮಕ. ಪರೀಕ್ಷೆಗಳ. ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಸರಿಯಾದ ಮಾಹಿತಿ ಅಗತ್ಯ. ಪಿಯುಸಿಯನ್ನು ಪೂರೈಸುವುದಷ್ಟೆ ಧ್ಯೇಯವಲ್ಲ. ಸ್ಪರ್ಧಾತ್ಮಕ‌ ಪರೀಕ್ಷೆಗಳನ್ಬು ಸಮರ್ಥವಾಗಿ ಎದರಿಸಿ ಭವಿಷ್ಯ ರೂಪಿಸುವಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸೋಲಬಾರದು. ಸಕಾಲದಲ್ಲಿ ಮಾಡುವ ಸರಿಯಾದ ನಿರ್ಧಾರದಲ್ಲಿ ನಮ್ಮ ಯಶಸ್ಸು ನಿಂತಿದೆ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಡಾ.ಎಂ.ಮೋಹನ. ಆಳ್ವ ನುಡಿದರು.

ಅವರು ವೇಣೂರಿನ ಬಾಹುಬಲಿ ಸಮುದಾಯ ಭವನದಲ್ಲಿ ನಡೆದ ಪರೀಕ್ಷೆ ಶಿಕ್ಷಣ ಮಾರ್ಗದರ್ಶನದಲ್ಲಿ ಮಾತಾಡುತ್ತಿದ್ದರು. ವಿದ್ಯಾರ್ಥಿಗಳ. ದೈಹಿಕ ಮತ್ತು ಮಾನಸಿಕ ಕ್ಷಮತೆಯೂ ಬಹುಮುಖ್ಯ ಅಂಶ ಕಲೆ , ವಾಣಿಜ್ಯ ಮತ್ತು ವಿಜ್ಞಾನ ಎಂಬ ಮೂರು ಪ್ರಮುಖ ಧಾರೆಗಳಲ್ಲಿ ಗುರುತಿಸುವ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಬುದ್ದಿಮತ್ತೆ ಮತ್ತು ಆಸಕ್ತಿಯನುಸಾರ ವಿಪುಲ ಅವಕಾಶಗಳ ಹೆಬ್ಬಾಗಿಲು” ಎಂದರು.

ವೇದಿಕೆಯಲ್ಲಿ ಗಣ್ಯರಾದ ಶಿವರಾಮ ಹೆಗ್ಡೆ, ಭಾಸ್ಕರ ಪೈ, ಜಗದೀಶ ನಾಯಕ್, ಜಯರಾಮ ಶೆಟ್ಟಿ, ಹರೀಶ್ ಕುಮಾರ್, ಜಗದೀಶ್ಚಂದ್ರ.ಡಿಕೆ, ಎಲ್.ಜೆ ಪೆರ್ನಾಂಡೀಸ್, ಡಾ.ಸಂತೋಷ್ ರೇಗೊ, ಡಾ. ಜಗದೀಶ್ ಚೌಟ, ಡಾ. ಶಾಂತಿ ಪ್ರಸಾದ್ ಹೆಗ್ಡೆ,ಸುಂದರ ಹೆಗ್ಡೆ, ಎಚ್ ಮಹಮ್ಮದ್, ಮಲ್ಲಿಕಾ ಕಾಶಿನಾಥ್ ಹೆಗ್ಡೆ,ಸುಭಾಷಿನಿ , ವಿಜಯ ಗೌಡ ಉಪಸ್ಥಿತರಿದ್ದರು.

ಡಾ.ಮೋಹನ ಆಳ್ವ ಅವರನ್ನು‌‌ ನಾಗರೀಕರ ಪರವಾಗಿ ಸನ್ಮಾನಿಸಲಾಯಿತು.

ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಗುಣಪ್ರಸಾದ್ ಕಾರಂದೂರು ವಂದಿಸಿದರು. ಆಳ್ವಾಸ್ ಕಾಲೇಜಿನ. ಕನ್ನಡ ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.

Related posts

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!