September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

ವೇಣೂರು: ಎಸ್.ಎಸ್.ಎಲ್.ಸಿ ಎಂಬುದು ಶಿಕ್ಷಣದ ಪ್ರಮುಖ. ಹಂತ. ಪಿ.ಯು.ಸಿ ಶಿಕ್ಷಣದ ಹಂತದಲ್ಲಿ ಬರುವ ಬಹು ಬಗೆಯ ಸ್ಪರ್ಧಾತ್ಮಕ. ಪರೀಕ್ಷೆಗಳ. ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಸರಿಯಾದ ಮಾಹಿತಿ ಅಗತ್ಯ. ಪಿಯುಸಿಯನ್ನು ಪೂರೈಸುವುದಷ್ಟೆ ಧ್ಯೇಯವಲ್ಲ. ಸ್ಪರ್ಧಾತ್ಮಕ‌ ಪರೀಕ್ಷೆಗಳನ್ಬು ಸಮರ್ಥವಾಗಿ ಎದರಿಸಿ ಭವಿಷ್ಯ ರೂಪಿಸುವಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸೋಲಬಾರದು. ಸಕಾಲದಲ್ಲಿ ಮಾಡುವ ಸರಿಯಾದ ನಿರ್ಧಾರದಲ್ಲಿ ನಮ್ಮ ಯಶಸ್ಸು ನಿಂತಿದೆ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಡಾ.ಎಂ.ಮೋಹನ. ಆಳ್ವ ನುಡಿದರು.

ಅವರು ವೇಣೂರಿನ ಬಾಹುಬಲಿ ಸಮುದಾಯ ಭವನದಲ್ಲಿ ನಡೆದ ಪರೀಕ್ಷೆ ಶಿಕ್ಷಣ ಮಾರ್ಗದರ್ಶನದಲ್ಲಿ ಮಾತಾಡುತ್ತಿದ್ದರು. ವಿದ್ಯಾರ್ಥಿಗಳ. ದೈಹಿಕ ಮತ್ತು ಮಾನಸಿಕ ಕ್ಷಮತೆಯೂ ಬಹುಮುಖ್ಯ ಅಂಶ ಕಲೆ , ವಾಣಿಜ್ಯ ಮತ್ತು ವಿಜ್ಞಾನ ಎಂಬ ಮೂರು ಪ್ರಮುಖ ಧಾರೆಗಳಲ್ಲಿ ಗುರುತಿಸುವ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಬುದ್ದಿಮತ್ತೆ ಮತ್ತು ಆಸಕ್ತಿಯನುಸಾರ ವಿಪುಲ ಅವಕಾಶಗಳ ಹೆಬ್ಬಾಗಿಲು” ಎಂದರು.

ವೇದಿಕೆಯಲ್ಲಿ ಗಣ್ಯರಾದ ಶಿವರಾಮ ಹೆಗ್ಡೆ, ಭಾಸ್ಕರ ಪೈ, ಜಗದೀಶ ನಾಯಕ್, ಜಯರಾಮ ಶೆಟ್ಟಿ, ಹರೀಶ್ ಕುಮಾರ್, ಜಗದೀಶ್ಚಂದ್ರ.ಡಿಕೆ, ಎಲ್.ಜೆ ಪೆರ್ನಾಂಡೀಸ್, ಡಾ.ಸಂತೋಷ್ ರೇಗೊ, ಡಾ. ಜಗದೀಶ್ ಚೌಟ, ಡಾ. ಶಾಂತಿ ಪ್ರಸಾದ್ ಹೆಗ್ಡೆ,ಸುಂದರ ಹೆಗ್ಡೆ, ಎಚ್ ಮಹಮ್ಮದ್, ಮಲ್ಲಿಕಾ ಕಾಶಿನಾಥ್ ಹೆಗ್ಡೆ,ಸುಭಾಷಿನಿ , ವಿಜಯ ಗೌಡ ಉಪಸ್ಥಿತರಿದ್ದರು.

ಡಾ.ಮೋಹನ ಆಳ್ವ ಅವರನ್ನು‌‌ ನಾಗರೀಕರ ಪರವಾಗಿ ಸನ್ಮಾನಿಸಲಾಯಿತು.

ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಗುಣಪ್ರಸಾದ್ ಕಾರಂದೂರು ವಂದಿಸಿದರು. ಆಳ್ವಾಸ್ ಕಾಲೇಜಿನ. ಕನ್ನಡ ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.

Related posts

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!