September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

ಬೆಳ್ತಂಗಡಿ : ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಹಯೋಗದಲ್ಲಿ 30ನೇ ವರ್ಷದ ರಾಜ್ಯಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ (ಪುಷ್ಪ ೫೩ ಮತ್ತು ೫೪) ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ಪುರಸ್ಕಾರ ಸಮಾರಂಭವು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಜ. 28 ರಂದು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ಪುರಸ್ಕಾರ ಹಾಗೂ ಶುಭಾಶೀರ್ವಾದ ನೀಡಿದರು.

ಗೀತೆ ರಚನೆಕಾರ, ಸಂಗೀತ ನಿರ್ದೇಶಕ, ನಟ ಬೆಂಗಳೂರಿನ ವಿ. ಮನೋಹರ್ ಶುಭಾಶಂಸನೆ ಮಾಡಿದರು.

ವೇದಿಕೆಯಲ್ಲಿ ಶಾಂತಿವನದ ಟ್ರಸ್ಟಿಗಳಾದ ಡಾ. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಕಾರ್ಯದರ್ಶಿ ಸೀತಾರಾಮ ತೋಳ್ಳಾಡಿತ್ತಾಯ ಉಪಸ್ಥಿತರಿದ್ದರು.

ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಾದ ಅಮಿತ್ ಎಸ್‌.ಡಿ.ಎಂ,ಭೂಮಿಕಾ ರಾವ್ ಪಡುಬಿದ್ರೆ, ಪ್ರಣತಿ ರಾವ್ ಉಡುಪಿ ಇವರು ಭಾಷಣ, ಶ್ಲೋಕ ಕಂಠಪಾಠ, ಶ್ಲೋಕವನ್ನು ಸಭೆಯ ಮುಂದಿಟ್ಟರು.

ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ| ಐ. ಶಶಿಕಾಂತ ಜೈನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಳಾಡಿತ್ತಾಯ ವಂದಿಸಿದರು. ಶಿಕ್ಷಕ ರಾಘವೇಂದ್ರ ರಾವ್ ಪಡುಬಿದ್ರೆ ಕಾರ್ಯಕ್ರಮ ನಿರ್ವಹಿಸಿದರು. ಯೋಗ ಸಂಘಟಕ ಅಶೋಕ ಪೂಜಾರಿ ಸಹಕರಿಸಿದರು.
ವಿದ್ಯಾರ್ಥಿನಿ ಸಿಂಚನಾ ಎಸ್ ಆಚಾರಿ ಪ್ರಾರ್ಥನೆ ಹಾಡಿದರು.

Related posts

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!