23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

ಬೆಳ್ತಂಗಡಿ : ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಹಯೋಗದಲ್ಲಿ 30ನೇ ವರ್ಷದ ರಾಜ್ಯಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ (ಪುಷ್ಪ ೫೩ ಮತ್ತು ೫೪) ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ಪುರಸ್ಕಾರ ಸಮಾರಂಭವು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಜ. 28 ರಂದು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ಪುರಸ್ಕಾರ ಹಾಗೂ ಶುಭಾಶೀರ್ವಾದ ನೀಡಿದರು.

ಗೀತೆ ರಚನೆಕಾರ, ಸಂಗೀತ ನಿರ್ದೇಶಕ, ನಟ ಬೆಂಗಳೂರಿನ ವಿ. ಮನೋಹರ್ ಶುಭಾಶಂಸನೆ ಮಾಡಿದರು.

ವೇದಿಕೆಯಲ್ಲಿ ಶಾಂತಿವನದ ಟ್ರಸ್ಟಿಗಳಾದ ಡಾ. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಕಾರ್ಯದರ್ಶಿ ಸೀತಾರಾಮ ತೋಳ್ಳಾಡಿತ್ತಾಯ ಉಪಸ್ಥಿತರಿದ್ದರು.

ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಾದ ಅಮಿತ್ ಎಸ್‌.ಡಿ.ಎಂ,ಭೂಮಿಕಾ ರಾವ್ ಪಡುಬಿದ್ರೆ, ಪ್ರಣತಿ ರಾವ್ ಉಡುಪಿ ಇವರು ಭಾಷಣ, ಶ್ಲೋಕ ಕಂಠಪಾಠ, ಶ್ಲೋಕವನ್ನು ಸಭೆಯ ಮುಂದಿಟ್ಟರು.

ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ| ಐ. ಶಶಿಕಾಂತ ಜೈನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಳಾಡಿತ್ತಾಯ ವಂದಿಸಿದರು. ಶಿಕ್ಷಕ ರಾಘವೇಂದ್ರ ರಾವ್ ಪಡುಬಿದ್ರೆ ಕಾರ್ಯಕ್ರಮ ನಿರ್ವಹಿಸಿದರು. ಯೋಗ ಸಂಘಟಕ ಅಶೋಕ ಪೂಜಾರಿ ಸಹಕರಿಸಿದರು.
ವಿದ್ಯಾರ್ಥಿನಿ ಸಿಂಚನಾ ಎಸ್ ಆಚಾರಿ ಪ್ರಾರ್ಥನೆ ಹಾಡಿದರು.

Related posts

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya
error: Content is protected !!