24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ ಆರೋಪ ಸಾಭಿತಾಗಿರುವುದಕ್ಕೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಜ.28 ರಂದು ಶಿಕ್ಷೆ ಪ್ರಕಟ ಮಾಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 11-11-2023 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಜ.28 ರಂದು ಆರೋಪಿ ಕೇಶವ ಪೂಜಾರಿ ಎಂಬಾತನಿಗೆ u/s 6 pocso 376(2)(n). 376(3) ನಲ್ಲಿ 20 ವರ್ಷ ಕಾರಗೃಹ ಶಿಕ್ಷೆ 50 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 4 ತಿಂಗಳ ಸಾದ ಕಾರಾಗೃಹ ಶಿಕ್ಷೆ ಹಾಗೂ u/s 506 ನಲ್ಲಿ 3 ತಿಂಗಳ ಅವಧಿ ಕಾರಾಗೃಹ ಶಿಕ್ಷೆ 5 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 15 ದಿನ ಕಾರಾವಾಸ ವಿಧಿಸಿ ಮಂಗಳೂರು FT&SC-2 ನ್ಯಾಯಾಲಯದ ನ್ಯಾಯಾಧೀಶರಾದ ಮನು.ಕೆ.ಎಸ್ ಅವರು ತೀರ್ಪು ನೀಡಿದ್ದಾರೆ.

ಈ ಪ್ರಕರಣವನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದು.ಇವರಿಗೆ ಬೆಳ್ತಂಗಡಿ ಪೊಲೀಸರಾದ ವಿಜಯ ರೈ , ಸುನಿತಾ ,ಬೆನ್ನಿಚ್ಚನ್ , ಚರಣ್ ರಾಜ್, ಎ.ಎಸ್.ಐ ಕುಲಜ್ಯೋತಿ ತಿಲಕ್ ರಾಜ್, ಸುನಿತಾ ತನಿಖಾ ಸಹಾಯಕರಾಗಿದ್ದು. ನ್ಯಾಯಾಲಯದ ಪೂರಕ ಸಾಕ್ಷಿಗಳನ್ನು ಧರ್ಮಸ್ಥಳ ಕೋರ್ಟ್ ಪಿಸಿ ಮೆಹಬೂಬ್ ಪಾಟೀಲ್‌ ನೋಡಿಕೊಂಡಿದ್ದರು. ಸರಕಾರಿ ಅಭಿಯೋಜರಾಗಿ ಬದ್ರಿನಾಥ್ ನಾಯರಿ ಸಹಕರಿಸಿದರು.

Related posts

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya
error: Content is protected !!