23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ ಆರೋಪ ಸಾಭಿತಾಗಿರುವುದಕ್ಕೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಜ.28 ರಂದು ಶಿಕ್ಷೆ ಪ್ರಕಟ ಮಾಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 11-11-2023 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಜ.28 ರಂದು ಆರೋಪಿ ಕೇಶವ ಪೂಜಾರಿ ಎಂಬಾತನಿಗೆ u/s 6 pocso 376(2)(n). 376(3) ನಲ್ಲಿ 20 ವರ್ಷ ಕಾರಗೃಹ ಶಿಕ್ಷೆ 50 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 4 ತಿಂಗಳ ಸಾದ ಕಾರಾಗೃಹ ಶಿಕ್ಷೆ ಹಾಗೂ u/s 506 ನಲ್ಲಿ 3 ತಿಂಗಳ ಅವಧಿ ಕಾರಾಗೃಹ ಶಿಕ್ಷೆ 5 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 15 ದಿನ ಕಾರಾವಾಸ ವಿಧಿಸಿ ಮಂಗಳೂರು FT&SC-2 ನ್ಯಾಯಾಲಯದ ನ್ಯಾಯಾಧೀಶರಾದ ಮನು.ಕೆ.ಎಸ್ ಅವರು ತೀರ್ಪು ನೀಡಿದ್ದಾರೆ.

ಈ ಪ್ರಕರಣವನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದು.ಇವರಿಗೆ ಬೆಳ್ತಂಗಡಿ ಪೊಲೀಸರಾದ ವಿಜಯ ರೈ , ಸುನಿತಾ ,ಬೆನ್ನಿಚ್ಚನ್ , ಚರಣ್ ರಾಜ್, ಎ.ಎಸ್.ಐ ಕುಲಜ್ಯೋತಿ ತಿಲಕ್ ರಾಜ್, ಸುನಿತಾ ತನಿಖಾ ಸಹಾಯಕರಾಗಿದ್ದು. ನ್ಯಾಯಾಲಯದ ಪೂರಕ ಸಾಕ್ಷಿಗಳನ್ನು ಧರ್ಮಸ್ಥಳ ಕೋರ್ಟ್ ಪಿಸಿ ಮೆಹಬೂಬ್ ಪಾಟೀಲ್‌ ನೋಡಿಕೊಂಡಿದ್ದರು. ಸರಕಾರಿ ಅಭಿಯೋಜರಾಗಿ ಬದ್ರಿನಾಥ್ ನಾಯರಿ ಸಹಕರಿಸಿದರು.

Related posts

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!