23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!