September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya
error: Content is protected !!