22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya
error: Content is protected !!