July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವತಿಯಿಂದ ನಡೆದ ಶತಮಾನೋತ್ತರ ವಿoಶತಿ (120ವರ್ಷ ) ಎಲ್.ಕೆ‌.ಜಿ ಕಟ್ಟಡದ ಸಹಾಯಾರ್ಥ ಪ್ರಯುಕ್ತ ಬಾಲವನ ಮತ್ತು ಪೀಠೋಪಕರಣಗಳ ಉದ್ಘಾಟನೆ ಹಾಗೂ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿ ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಸರ್ಕಾರದ್ದು ಮಾತ್ರವಲ್ಲ, ನಮ್ಮೆಲ್ಲರ ಜವಾಬ್ದಾರಿ ಕೂಡ ಹೌದು. ಇಂದು ಸರಕಾರಿ ಶಾಲೆಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು ಎಸ್.ಡಿ.ಎಮ್.ಸಿ ಸದಸ್ಯರು, ಊರ ದಾನಿಗಳು, ಹಳೆಯ ವಿದ್ಯಾರ್ಥಿಗಳ ಸಹಕಾರ ಮುಖ್ಯವಾಗಿದೆ ಎಂದು ಪ್ರಶಂಸನೀಯ ಮಾತುಗಳನ್ನಾಡಿ, ಶಾಲೆಗೆ ಸರಕಾರದ ವತಿಯಿಂದ ಸುಸಜ್ಜಿತ ಶೌಚಾಲಯದ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮಾತನಾಡಿ ಕನ್ನಡ ಶಾಲೆಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರ ನೀಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಹಾಜಿ ಅಬ್ದುಲ್ ಲತೀಫ್, ಸಲೀಂ ಗುರುವಾಯನಕೆರೆ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೋಪಿನಾಥ್ ನಾಯಕ್, ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಲಾಲ್ ,ಹೇಮಂತ್ ಯರ್ಡೂರು, ರಾಮಕೃಷ್ಣ ನಾಯಕ್, ಪ್ರವೀಣ್ ಗುರುವಾಯನಕೆರೆ, ಸಿ‌.ಆರ್.ಪಿ ರಾಜೇಶ್ ಆಚಾರ್ಯ, ಮುಸ್ತಾಫ, ಮುಖ್ಯ ಶಿಕ್ಷಕಿ ಉಮಸ ಯನ್, ವೇರೋನಿಕಾ, ಹಾಗೂ ಅಧ್ಯಾಪಕ ವೃಂದದವರು, ಮೊದಲಾದವರು ಉಪಸ್ಥಿತರಿದ್ದರು.

ಗುರುವಾಯನಕೆರೆ, ಶಕ್ತಿನಗರ, ಕೊಜಪ್ಪಾಡಿ ಅಂಗನವಾಡಿ ಕೇಂದ್ರದ ಪುಟಾಣಿಗಳು ಮತ್ತು ಎಲ್ ಕೆ ಜಿ, ಯು ಕೆ ಜಿ ವಿದ್ಯಾರ್ಥಿಗಳಿಂದ ಮತ್ತು ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು‌. ನಿರೂಪಣೆಯನ್ನು ಪುಣ್ಯಶ್ರೀ ಕೋಟ್ಯಾನ್ ಪುಂಜಾಲಕಟ್ಟೆ, ನೆರವೇರಿಸಿದರು.

Related posts

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya
error: Content is protected !!