July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

ಬೆಳ್ತಂಗಡಿ : ಜನವರಿ 26 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಪರಿಣಾಮಕಾರಿ ಭಾಷಣ ಸ್ಪರ್ಧೆಯನ್ನು ಜೇಸಿ ಭವನ, ಬೆಳ್ತಂಗಡಿ ಇಲ್ಲಿ ನಡೆಸಲಾಯಿತು.

ತಾಲೂಕಿನ ವಿವಿಧ ಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳು ದಾರ್ಶನಿಕ ವೇದಾಂತಿ ಸ್ವಾಮಿ ವಿವೇಕಾನಂದ ಎಂಬ ವಿಷಯದಲ್ಲಿ ಭಾಷಣ ಮಂಡಿಸಿದರು.
ಪ್ರೌಢ ಶಾಲಾ ವಿಭಾಗದಲ್ಲಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ವಿಧ್ಯಾರ್ಥಿನಿ ಕು. ಧನುಶ್ರೀ ಪ್ರಥಮ ಹಾಗೂ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ಕು. ರಮ್ಯಶ್ರೀ ದ್ವಿತೀಯ ಸ್ಥಾನ ಮತ್ತು ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿನ ವಿಧ್ಯಾರ್ಥಿನಿ ಕು. ಜಿಯ ಜೈನ್ ತೃತೀಯ ಸ್ಥಾನ ಪಡೆದರು.

ಪದವಿ ಪೂರ್ವ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು ಇಲ್ಲಿನ ವಿಧ್ಯಾರ್ಥಿನಿ ನಿರೀಕ್ಷ ಪೂಜಾರಿ ಪ್ರಥಮ ಸ್ಥಾನ ಪಡೆದರೆ ಗುರುದೇವ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿ ದೀಪಕ್ ದ್ವಿತೀಯ ಸ್ಥಾನ ಪಡೆದರು.

ಪದವಿ ವಿಭಾಗದಲ್ಲಿ ಧರ್ಮಸ್ಥಳ ಪದವಿ ಕಾಲೇಜಿನ ವಿಧ್ಯಾರ್ಥಿ ಕು. ನೆವಿಲ್ ನವೀನ್ ಮೊರಾಸ್ ಪ್ರಥಮ ಸ್ಥಾನ ಹಾಗೂ ಅದೇ ಕಾಲೇಜಿನ ಕು. ವೇಣೂ ದ್ವಿತೀಯ ಪಡೆದಿರುತ್ತಾರೆ.


ಕಾರ್ಯಕ್ರಮವನ್ನು ಸಂಯೋಜಕರಾದ ಜೇಸಿ ಪೃಥ್ವಿರಾಜ್ ಜೈನ್ ಅಂಡಿಂಜೆ ನಿರ್ವಹಿಸಿ ಸಮರೋಪ ಸಮಾರಂಭದಲ್ಲಿ ಸ್ಪರ್ಧೆಯ ವಿಜೇತರನ್ನು ಘೋಷಿಸಿದರು.

ಉಪನ್ಯಾಸಕರಾದ ಜೇಸಿ ದಿನೇಶ್ ಮತ್ತು ಉಪನ್ಯಾಸಕ ಹಾಗೂ ಪತ್ರಿಕಾ ವರದಿಗಾರ ಜೇಸಿ ಗಣೇಶ್ ಬಿ. ಶಿರ್ಲಾಲು ಇವರು ತೀರ್ಪುಗಾರರಾಗಿ ಆಗಮಿಸಿದ್ದರು. ಭಾಗವಹಿಸಿದ ಎಲ್ಲಾ ಸ್ಪರ್ಧಿ ಗಳಿಗೆ ಪ್ರಮಾಣ ಪತ್ರ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಜೇಸಿ ಆಶಾಲತಾ ಪ್ರಶಾಂತ್ ವಹಿಸಿ ಕಾರ್ಯಕ್ರಮದ ಧ್ಯೇಯೊದ್ದೇಶ ಬಗ್ಗೆ ಮಾಹಿತಿ ನೀಡಿ ಸರ್ವರಿಗೂ ಸ್ವಾಗತ ಕೋರಿದರು. ವಲಯ ಉಪಾಧ್ಯಕ್ಷ ಜೇಸಿ ರಂಜಿತ್ ಎಚ್ ಡಿ. ಜೇಸಿಐ ಬೆಳ್ತಂಗಡಿಯ ಸದಸ್ಯರು, ಜೂನಿಯರ್ ಜೇಸಿ ವಿಭಾಗದ ಸದಸ್ಯರು ವಿದ್ಯಾರ್ಥಿಗಳ ಪೋಷಕರು ಶಿಕ್ಷಕರು ಉಪಸ್ಥಿತರಿದ್ದರು. ಜೇಸಿ ಪ್ರಶಾಂತ ಲಾೖಲ ಇವರ ವೇದಿಕೆ ಆಹ್ವಾನದೊಂದಿಗೆ ಘಟಕದ ಕಾರ್ಯದರ್ಶಿ ಜೇಸಿ ಶೈಲೇಶ್ ಕೆ ಧನ್ಯವಾದವನ್ನು ಸಲ್ಲಿಸಿದರು.

Related posts

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya
error: Content is protected !!