30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

ಬೆಳ್ತಂಗಡಿ : ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಹಯೋಗದಲ್ಲಿ 30ನೇ ವರ್ಷದ ರಾಜ್ಯಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ (ಪುಷ್ಪ ೫೩ ಮತ್ತು ೫೪) ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ಪುರಸ್ಕಾರ ಸಮಾರಂಭವು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಜ. 28 ರಂದು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ಪುರಸ್ಕಾರ ಹಾಗೂ ಶುಭಾಶೀರ್ವಾದ ನೀಡಿದರು.

ಗೀತೆ ರಚನೆಕಾರ, ಸಂಗೀತ ನಿರ್ದೇಶಕ, ನಟ ಬೆಂಗಳೂರಿನ ವಿ. ಮನೋಹರ್ ಶುಭಾಶಂಸನೆ ಮಾಡಿದರು.

ವೇದಿಕೆಯಲ್ಲಿ ಶಾಂತಿವನದ ಟ್ರಸ್ಟಿಗಳಾದ ಡಾ. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಕಾರ್ಯದರ್ಶಿ ಸೀತಾರಾಮ ತೋಳ್ಳಾಡಿತ್ತಾಯ ಉಪಸ್ಥಿತರಿದ್ದರು.

ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಾದ ಅಮಿತ್ ಎಸ್‌.ಡಿ.ಎಂ,ಭೂಮಿಕಾ ರಾವ್ ಪಡುಬಿದ್ರೆ, ಪ್ರಣತಿ ರಾವ್ ಉಡುಪಿ ಇವರು ಭಾಷಣ, ಶ್ಲೋಕ ಕಂಠಪಾಠ, ಶ್ಲೋಕವನ್ನು ಸಭೆಯ ಮುಂದಿಟ್ಟರು.

ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ| ಐ. ಶಶಿಕಾಂತ ಜೈನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಳಾಡಿತ್ತಾಯ ವಂದಿಸಿದರು. ಶಿಕ್ಷಕ ರಾಘವೇಂದ್ರ ರಾವ್ ಪಡುಬಿದ್ರೆ ಕಾರ್ಯಕ್ರಮ ನಿರ್ವಹಿಸಿದರು. ಯೋಗ ಸಂಘಟಕ ಅಶೋಕ ಪೂಜಾರಿ ಸಹಕರಿಸಿದರು.
ವಿದ್ಯಾರ್ಥಿನಿ ಸಿಂಚನಾ ಎಸ್ ಆಚಾರಿ ಪ್ರಾರ್ಥನೆ ಹಾಡಿದರು.

Related posts

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya
error: Content is protected !!