July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

ಉಜಿರೆ : ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಜ. 29ರಂದು ಉಜಿರೆಯ ಸರ್ಕಲ್ ನಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ ಮಾತನಾಡಿ, 10-15 ವರ್ಷಗಳ ಹಿಂದಿನ ಬಸ್ ಗಳನ್ನು ಓಡಿಸುವಂತಹ ಕೆಲಸಗಳು ಮಂಗಳೂರು – ಧರ್ಮಸ್ಥಳದ ಡಿಪ್ಪೋಗಳಲ್ಲಿ ಆಗುತ್ತಿದೆ. ಹಾಗಾಗಿ ಇಂತಹ ಅನಾಹುತಗಳು ಪದೇ ಪದೇ ನಡೆಯುತ್ತಿದೆ. ಬಸ್ ನ ಸಂಖ್ಯೆಗಳನ್ನು ಹೆಚ್ಚು ಮಾಡಬೇಕು. ಸೋಮಂತಡ್ಕದಲ್ಲಿ ನಡೆದ ಅನಾಹುತದಲ್ಲಿ ಕೂಡ ಓವರ್ ಲೋಡ್ ಆಗಿತ್ತು. ಸುರಕ್ಷತಾ ಕ್ರಮಗಳನ್ನು ಕೆ.ಎಸ್.ಆರ್.ಟಿ.ಸಿ ತೆಗೆದುಕೊಳ್ಳಬೇಕು. ಒಳ್ಳೆಯ ರೀತಿಯ ವ್ಯವಸ್ಥೆಯುತವಾದಂತಹ ಬಸ್ ಗಳನ್ನು ಹಾಕಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಸಂಚಾಲಕ ಪ್ರಾರ್ಥನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!