ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತಂತೆ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು,ಮೊದಲ ಹಂತದಲ್ಲಿ ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದಸ್ಯರಿಗೆ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್ ಇವರು ಸ್ವಚ್ಛತೆ ಕಾಪಾಡುವಲ್ಲಿ ನಾಗರೀಕರಾಗಿ ನಮ್ಮ ಪಾತ್ರ ಮುಖ್ಯ. ಒಣ ಕಸ ಸಂಗ್ರಹಿಸಿ ಎಮ್. ಆರ್. ಎಫ್ ಘಟಕ ತಲುಪಿಸುವ ಕಾರ್ಯ ಸತತವಾಗಿ ನಡೆಯಬೇಕು ಎಂದು ಗ್ರಾ. ಪಂ ಅಧ್ಯಕ್ಷರಿಗೆ, ಸದಸ್ಯರಿಗೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸಲಹೆ ಸೂಚನೆ ನೀಡಿದರು.

ಈ ಸಂದರ್ಭ ಘನ ತ್ಯಾಜ್ಯ ನಿರ್ವಹಣಾ ಸಮಾಲೋಚಕರಾದ ನವೀನ್ ಕೋಣಾಜೆ ಮತ್ತು ಪವನ್ ಎಮ್. ಆರ್. ಎಫ್ ಘಟಕ ಕಾರ್ಯ ನಿರ್ವಹಿಸುತ್ತಿರುವ ಕುರಿತಂತೆ ಮಾಹಿತಿ ನೀಡಿದರು.

ಈ ಸಂದರ್ಭ ಅಧಿಕಾರಿಗಳೊಂದಿಗೆ ತರಬೇತುದಾರರು ಘನ ತ್ಯಾಜ್ಯ ನಿರ್ವಹಣಾ ಘಟಕ, ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಾಯಿತು ಹಾಗೂ ವ್ಯೂಹಮ್ ಸಂಸ್ಥೆಯಡಿ ಬ್ಯಾಕ್ ಸೋಲ್ಡ್ಜರ್ ಫ್ಲೖ ಟೆಕ್ನೊಲಜಿಯಡಿ ಗೊಬ್ಬರ ತಯಾರಿಸುವ ಕುರಿತಂತೆ ಮಾಹಿತಿ ನೀಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಶಿಬಾಜೆ, ಅರಸಿನಮಕ್ಕಿ ಗ್ರಾಮಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ,ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಶಿಬಾಜೆ ಮತ್ತು ಅರಸಿನಮಕ್ಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಎನ್ ಆರ್. ಎಲ್. ಎಮ್ ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ ಜೖನ್,ಎಮ್. ಆರ್. ಎಫ್ ಘಟಕದ ಸಿಬ್ಬಂದಿಗಳಾದ ಭರತ್, ರಮೇಶ್ ಉಪಸ್ಥಿತರಿದ್ದರು.

Related posts

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya
error: Content is protected !!