ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತಂತೆ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು,ಮೊದಲ ಹಂತದಲ್ಲಿ ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದಸ್ಯರಿಗೆ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್ ಇವರು ಸ್ವಚ್ಛತೆ ಕಾಪಾಡುವಲ್ಲಿ ನಾಗರೀಕರಾಗಿ ನಮ್ಮ ಪಾತ್ರ ಮುಖ್ಯ. ಒಣ ಕಸ ಸಂಗ್ರಹಿಸಿ ಎಮ್. ಆರ್. ಎಫ್ ಘಟಕ ತಲುಪಿಸುವ ಕಾರ್ಯ ಸತತವಾಗಿ ನಡೆಯಬೇಕು ಎಂದು ಗ್ರಾ. ಪಂ ಅಧ್ಯಕ್ಷರಿಗೆ, ಸದಸ್ಯರಿಗೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸಲಹೆ ಸೂಚನೆ ನೀಡಿದರು.

ಈ ಸಂದರ್ಭ ಘನ ತ್ಯಾಜ್ಯ ನಿರ್ವಹಣಾ ಸಮಾಲೋಚಕರಾದ ನವೀನ್ ಕೋಣಾಜೆ ಮತ್ತು ಪವನ್ ಎಮ್. ಆರ್. ಎಫ್ ಘಟಕ ಕಾರ್ಯ ನಿರ್ವಹಿಸುತ್ತಿರುವ ಕುರಿತಂತೆ ಮಾಹಿತಿ ನೀಡಿದರು.

ಈ ಸಂದರ್ಭ ಅಧಿಕಾರಿಗಳೊಂದಿಗೆ ತರಬೇತುದಾರರು ಘನ ತ್ಯಾಜ್ಯ ನಿರ್ವಹಣಾ ಘಟಕ, ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಾಯಿತು ಹಾಗೂ ವ್ಯೂಹಮ್ ಸಂಸ್ಥೆಯಡಿ ಬ್ಯಾಕ್ ಸೋಲ್ಡ್ಜರ್ ಫ್ಲೖ ಟೆಕ್ನೊಲಜಿಯಡಿ ಗೊಬ್ಬರ ತಯಾರಿಸುವ ಕುರಿತಂತೆ ಮಾಹಿತಿ ನೀಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಶಿಬಾಜೆ, ಅರಸಿನಮಕ್ಕಿ ಗ್ರಾಮಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ,ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಶಿಬಾಜೆ ಮತ್ತು ಅರಸಿನಮಕ್ಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಎನ್ ಆರ್. ಎಲ್. ಎಮ್ ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ ಜೖನ್,ಎಮ್. ಆರ್. ಎಫ್ ಘಟಕದ ಸಿಬ್ಬಂದಿಗಳಾದ ಭರತ್, ರಮೇಶ್ ಉಪಸ್ಥಿತರಿದ್ದರು.

Related posts

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!