25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

ಉಜಿರೆ : ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಜ. 29ರಂದು ಉಜಿರೆಯ ಸರ್ಕಲ್ ನಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ ಮಾತನಾಡಿ, 10-15 ವರ್ಷಗಳ ಹಿಂದಿನ ಬಸ್ ಗಳನ್ನು ಓಡಿಸುವಂತಹ ಕೆಲಸಗಳು ಮಂಗಳೂರು – ಧರ್ಮಸ್ಥಳದ ಡಿಪ್ಪೋಗಳಲ್ಲಿ ಆಗುತ್ತಿದೆ. ಹಾಗಾಗಿ ಇಂತಹ ಅನಾಹುತಗಳು ಪದೇ ಪದೇ ನಡೆಯುತ್ತಿದೆ. ಬಸ್ ನ ಸಂಖ್ಯೆಗಳನ್ನು ಹೆಚ್ಚು ಮಾಡಬೇಕು. ಸೋಮಂತಡ್ಕದಲ್ಲಿ ನಡೆದ ಅನಾಹುತದಲ್ಲಿ ಕೂಡ ಓವರ್ ಲೋಡ್ ಆಗಿತ್ತು. ಸುರಕ್ಷತಾ ಕ್ರಮಗಳನ್ನು ಕೆ.ಎಸ್.ಆರ್.ಟಿ.ಸಿ ತೆಗೆದುಕೊಳ್ಳಬೇಕು. ಒಳ್ಳೆಯ ರೀತಿಯ ವ್ಯವಸ್ಥೆಯುತವಾದಂತಹ ಬಸ್ ಗಳನ್ನು ಹಾಕಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಸಂಚಾಲಕ ಪ್ರಾರ್ಥನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya
error: Content is protected !!