25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

ಉಜಿರೆ : ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಜ. 29ರಂದು ಉಜಿರೆಯ ಸರ್ಕಲ್ ನಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ ಮಾತನಾಡಿ, 10-15 ವರ್ಷಗಳ ಹಿಂದಿನ ಬಸ್ ಗಳನ್ನು ಓಡಿಸುವಂತಹ ಕೆಲಸಗಳು ಮಂಗಳೂರು – ಧರ್ಮಸ್ಥಳದ ಡಿಪ್ಪೋಗಳಲ್ಲಿ ಆಗುತ್ತಿದೆ. ಹಾಗಾಗಿ ಇಂತಹ ಅನಾಹುತಗಳು ಪದೇ ಪದೇ ನಡೆಯುತ್ತಿದೆ. ಬಸ್ ನ ಸಂಖ್ಯೆಗಳನ್ನು ಹೆಚ್ಚು ಮಾಡಬೇಕು. ಸೋಮಂತಡ್ಕದಲ್ಲಿ ನಡೆದ ಅನಾಹುತದಲ್ಲಿ ಕೂಡ ಓವರ್ ಲೋಡ್ ಆಗಿತ್ತು. ಸುರಕ್ಷತಾ ಕ್ರಮಗಳನ್ನು ಕೆ.ಎಸ್.ಆರ್.ಟಿ.ಸಿ ತೆಗೆದುಕೊಳ್ಳಬೇಕು. ಒಳ್ಳೆಯ ರೀತಿಯ ವ್ಯವಸ್ಥೆಯುತವಾದಂತಹ ಬಸ್ ಗಳನ್ನು ಹಾಕಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಸಂಚಾಲಕ ಪ್ರಾರ್ಥನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!