September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

ಉಜಿರೆ : ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಜ. 29ರಂದು ಉಜಿರೆಯ ಸರ್ಕಲ್ ನಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ ಮಾತನಾಡಿ, 10-15 ವರ್ಷಗಳ ಹಿಂದಿನ ಬಸ್ ಗಳನ್ನು ಓಡಿಸುವಂತಹ ಕೆಲಸಗಳು ಮಂಗಳೂರು – ಧರ್ಮಸ್ಥಳದ ಡಿಪ್ಪೋಗಳಲ್ಲಿ ಆಗುತ್ತಿದೆ. ಹಾಗಾಗಿ ಇಂತಹ ಅನಾಹುತಗಳು ಪದೇ ಪದೇ ನಡೆಯುತ್ತಿದೆ. ಬಸ್ ನ ಸಂಖ್ಯೆಗಳನ್ನು ಹೆಚ್ಚು ಮಾಡಬೇಕು. ಸೋಮಂತಡ್ಕದಲ್ಲಿ ನಡೆದ ಅನಾಹುತದಲ್ಲಿ ಕೂಡ ಓವರ್ ಲೋಡ್ ಆಗಿತ್ತು. ಸುರಕ್ಷತಾ ಕ್ರಮಗಳನ್ನು ಕೆ.ಎಸ್.ಆರ್.ಟಿ.ಸಿ ತೆಗೆದುಕೊಳ್ಳಬೇಕು. ಒಳ್ಳೆಯ ರೀತಿಯ ವ್ಯವಸ್ಥೆಯುತವಾದಂತಹ ಬಸ್ ಗಳನ್ನು ಹಾಕಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಸಂಚಾಲಕ ಪ್ರಾರ್ಥನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!