25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

ಬೆಳ್ತಂಗಡಿ ತಾಲೂಕಿನ ಕಾಜೂರು ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನ ವಾರ್ಷಿಕ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಜ.30 ರಂದು ರಾತ್ರಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ದ.ಕ.ಜಿಲ್ಲಾ ಸಂಯುಕ್ತ ಜಮಾಅತಿನ ಖಾಝಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ರವರು ಆಗಮಿಸಲಿದ್ದಾರೆ.

ಇವರನ್ನು ಬೆಳ್ತಂಗಡಿಯ ಲಾಯಿಲದಿಂದ ರಾತ್ರಿ 7 ಗಂಟೆಗೆ ವಾಹನ ಜಾಥಾದ ಮೂಲಕ ಸಂದಲ್ ಮೆರವಣಿಗೆಯಲ್ಲಿ ಸ್ವಾಗತಿಸುವುದು. ತಾಲೂಕಿನಲ್ಲಿರುವ ಎಲ್ಲಾ ಮೊಹಲ್ಲಾಗಳ ವಿವಿಧ ಸಮಿತಿಗಳ ಪ್ರತಿನಿಧಿಗಳು, ಜಮಾಅತರು, ಉಲಮಾ ಉಮರಾ ನಾಯಕರು ತಮ್ಮ ವಾಹನದೊಂದಿಗೆ ಶಿಸ್ತುಬದ್ದವಾಗಿ ಜಾಥಾವನ್ನು ಸಂಘಟಿಸಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಯಾವುದೇ ತೊಂದರೆ ಆಗದೆ ಟ್ರಾಫಿಕ್ ಪೋಲಿಸರೊಂದಿಗೆ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸರಕಾರದ ದ.ಕ.ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮನವಿ ಮಾಡಿಕೊಂಡಿದ್ದಾರೆ.

Related posts

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya
error: Content is protected !!