September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

ಬೆಳ್ತಂಗಡಿ ತಾಲೂಕಿನ ಕಾಜೂರು ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನ ವಾರ್ಷಿಕ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಜ.30 ರಂದು ರಾತ್ರಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ದ.ಕ.ಜಿಲ್ಲಾ ಸಂಯುಕ್ತ ಜಮಾಅತಿನ ಖಾಝಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ರವರು ಆಗಮಿಸಲಿದ್ದಾರೆ.

ಇವರನ್ನು ಬೆಳ್ತಂಗಡಿಯ ಲಾಯಿಲದಿಂದ ರಾತ್ರಿ 7 ಗಂಟೆಗೆ ವಾಹನ ಜಾಥಾದ ಮೂಲಕ ಸಂದಲ್ ಮೆರವಣಿಗೆಯಲ್ಲಿ ಸ್ವಾಗತಿಸುವುದು. ತಾಲೂಕಿನಲ್ಲಿರುವ ಎಲ್ಲಾ ಮೊಹಲ್ಲಾಗಳ ವಿವಿಧ ಸಮಿತಿಗಳ ಪ್ರತಿನಿಧಿಗಳು, ಜಮಾಅತರು, ಉಲಮಾ ಉಮರಾ ನಾಯಕರು ತಮ್ಮ ವಾಹನದೊಂದಿಗೆ ಶಿಸ್ತುಬದ್ದವಾಗಿ ಜಾಥಾವನ್ನು ಸಂಘಟಿಸಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಯಾವುದೇ ತೊಂದರೆ ಆಗದೆ ಟ್ರಾಫಿಕ್ ಪೋಲಿಸರೊಂದಿಗೆ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸರಕಾರದ ದ.ಕ.ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮನವಿ ಮಾಡಿಕೊಂಡಿದ್ದಾರೆ.

Related posts

ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya
error: Content is protected !!