September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

ಉಜಿರೆ: ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಡಾ. ಶಲೀಪ್ ಎ.ಪಿ. ಹೇಳಿದರು.

ಉಜಿರೆಯ ಎಸ್.ಡಿ.ಎಂ. ಬಿ.ಎಡ್. ಕಾಲೇಜು, ಎಸ್.ಡಿ.ಎಂ. ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳು ಜ. 28ರಂದು ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜಂಟಿಯಾಗಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸ್ಪರ್ಧೆಯಲ್ಲಿ ಸೋಲು – ಗೆಲುವು ಸಾಮಾನ್ಯ. ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ಒಂದೇ ರೀತಿಯಲ್ಲಿ ಎರಡನ್ನೂ ಸ್ವೀಕರಿಸಿ. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಸಂಸ್ಥೆ ಹಾಗೂ ಪೋಷಕರು ನೀಡುವ ಪ್ರೋತ್ಸಾಹಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬೆಳೆಯಬೇಕು” ಎಂದು ಅವರು ಸಲಹೆ ನೀಡಿದರು.
ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಎಚ್. ಅವರು ಮಾತನಾಡಿ, ಆರಂಭದಿಂದಲೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯು ಕ್ರೀಡಾ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ ಜೊತೆಗೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕ್ರೀಡೆಗಳಲ್ಲಿ ಸಾಧನೆ ಮಾಡಲು ಅನುಕೂಲವಾಗಿದೆ ಎಂದರು.


ಎಸ್.ಡಿ.ಎಂ. ಬಿ.ಎಡ್. ಕಾಲೇಜು ಪ್ರಾಂಶುಪಾಲ ಸಂತೋಷ್ ಸಲ್ದಾನ ಸ್ವಾಗತಿಸಿದರು. ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಕಾಮತ್ ವಂದಿಸಿದರು. ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸಂದೇಶ್ ಕುಮಾರ್ ಕ್ರೀಡಾಕೂಟ ನಡೆಸಿಕೊಟ್ಟರು.

Related posts

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ‘ಡೈಮಂಡ್ ಫೆಸ್ಟ್’ಗೆ ಚಾಲನೆ

Suddi Udaya
error: Content is protected !!