22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಸರ್ವಧರ್ಮೀಯ ಸಮನ್ವಯ ಶ್ರದ್ಧಾ ಕೇಂದ್ರ ಕಾಜೂರು ಮಖಾಂ ಶರೀಫ್ ಉರೂಸ್ ಪ್ರಯುಕ್ತ ಜ.24 ರಿಂದ ಪ್ರತಿದಿನ ರಾತ್ರಿ ಪ್ರಖ್ಯಾತ ಧಾರ್ಮಿಕ ವಿದ್ವಾಂಸರಿಂದ ಪ್ರವಚನ ಕಾರ್ಯಕ್ರಮ ನಡೆಯುತ್ತಿದೆ.


ಸಯ್ಯಿದ್‌ ಕಾಜೂರು ತಂಙಳ್ ರಿಂದ ಉದ್ಘಾಟನೆಗೊಂಡ ಈ‌ ಪ್ರವಚನ ಮಾಲಿಕೆಯಲ್ಲಿ ಕಿಲ್ಲೂರು ಖತೀಬ್ ಶಂಶೀರ್ ಸಖಾಫಿ ಪರಪ್ಪು, ಮುಹಮ್ಮದ್ ತೌಸೀಫ್ ಸ‌ಅದಿ ಹರೇಕಳ‌, ಯಾಸಿರ್ ಸಖಾಫಿ ಅಲ್‌ಅಝ್ಹರಿ ಮಲಪ್ಪುರಂ, ಅಬೂಬಕ್ಕರ್ ಸಿದ್ದೀಕ್‌ ಜಲಾಲಿ‌ ಕಕ್ಕಿಂಜೆ, ಅಬ್ದುಲ್ ಅಝೀಝ್ ಅಶ್ರಫಿ‌ ಪಾಣತ್ತೂರು, ಮುಹಮ್ಮದ್ ಇರ್ಷಾದ್ ಸಖಾಫಿ ಅಲ್ ಅಝ್ಹರಿ ಮಲಪ್ಪುರಂ ಇವರು ಪ್ರವಚನ ನಡೆಸಿಕೊಟ್ಟಿದ್ದಾರೆ.


ವಿವಿಧ ದಿನಗಳಲ್ಲಿ ಸಯ್ಯಿದರುಗಳಾದ ಇಸ್ಮಾಯಿಲ್ ತಂಙಳ್ ಉಜಿರೆ, ಮುಖ್ತಾರ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಕೇರಳ, ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ ಇವರು‌ ಭಾಗಿಯಾಗಿದ್ದರು.
ಹಾಫಿಳ್ ಸ್ವಾದಿಕ್ ಅಲಿ‌ ಫಾಳಿಲಿ ಗೂಡಲ್ಲೂರು ಮತ್ತು ಸಂಗಡಿಗರಿಂದ ಬುರ್ದಾ ಮಜ್ಲಿಸ್ ಕೂಡ ನಡೆಯಿತು.
ಕಾಜೂರು ಮತ್ತು ಕಿಲ್ಲೂರು ಜಂಟಿ ಉರೂಸ್ ಸಮಿತಿ ನೇತೃತ್ವದಲ್ಲಿ ನಡೆಯುವ ಈ ಸಮಾರಂಭಕ್ಕೆ ಖಾಝಿ ಎ.ಪಿ ಉಸ್ತಾದ್ ಮತ್ತು ಗೌರವಾಧ್ಯಕ್ಷ ಕುಂಬೋಳ್ ತಂಙಳ್ ಮಾರ್ಗದರ್ಶನ ನೀಡುತ್ತಿದ್ದು ಕಾಜೂರು ತಂಙಳ್ ನೇತೃತ್ವ ವಹಿಸುತ್ತಿದ್ದಾರೆ.
ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು,‌ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಫ್ ಜಿಲ್ಲಾ ಸಮಿತಿ ಸದಸ್ಯ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಕೋಶಾಧಿಕಾರಿ ಕೆ.ಎಮ್ ಕಮಾಲ್ ಕಾಜೂರು, ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕಾಜೂರು ಆಡಳಿತ ಸಮಿತಿ ಉಪಾಧ್ಯಕ್ಷ ಬದ್ರುದ್ದೀನ್ ಕಾಜೂರು,‌ ಕಿಲ್ಲೂರು ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆಮನೆ ಹಾಗೂ ಕಾಜೂರಿನ ಎಲ್ಲಾ ಪೂರ್ವಾಧ್ಯಕ್ಷರುಗಳು ಭಾಗವಹಿಸುತ್ತಿದ್ದಾರೆ.

ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವನೆಗಯಯ್ಯುತ್ತಿದ್ದಾರೆ. ಜಂಟಿ‌ ಉರೂಸ್ ಸಮಿತಿ ಪದಾಧಿಕಾರಿಗಳು, ಅಧೀನ ಮಸ್ಜಿದ್ ಮತ್ತು ಮದರಸಗಳ ಧರ್ಮಗುರುಗಳು ಸಹಕಾರ ನೀಡುತ್ತಿದ್ದಾರೆ. ಪ್ರತಿ ದಿನ‌ ಆರ್‌ಡಿಸಿ ವತಿಯಿಂದ ದಫ್ಫ್ ಕಾರ್ಯಕ್ರಮ ನಡೆಯುತ್ತಿದೆ.

ಫೆ.2 ; ಉರೂಸ್ ಸಮಾರೋಪ

ಫೆ.2 ರಂದು ಉರೂಸ್ ಮಹಾಸಂಭ್ರಮದ ಸಮಾರೋಪ ಮತ್ತು ಮಹಾ ಅನ್ನದಾನ ನಡೆಯಲಿದೆ. ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಯ್ಯಿದ್‌ ಕುಂಬೋಳ್ ತಂಙಳ್, ಶಿಹಾಬುದ್ದೀನ್ ಮುತ್ತನ್ನೂರು ತಂಙಳ್, ವಕ್ಫ್ ಮಾಜಿ ರಾಜ್ಯಾಧ್ಯಕ್ಷ ಶಾಫಿ ಸ‌ಅದಿ, ಅಬ್ದುಲ್ ಅಝೀಝ್ ದಾರಿಮಿ, ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಉಳ್ಳಾಲ ಅಧ್ಯಕ್ಷ ಹನೀಫ್ ಹಾಜಿ ಮೊದಲಾದವರು ಭಾಗವಹಿಸಲಿದ್ದಾರೆ.

Related posts

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
error: Content is protected !!