September 6, 2026
ಧಾರ್ಮಿಕ

ಕೊಕ್ಕಡ ಬಡೆಕ್ಕರ ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯರಿಗೆ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಮಹಾ ಪ್ರಧಾನ ಅರ್ಚಕ ಗೌರವ

ಬೆಳ್ತಂಗಡಿ: ಭಾರತದ ಅತೀ ಶ್ರೀಮಂತ ದೇವಸ್ಥಾನ ಕೇರಳದ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪ್ರಧಾನ ಮಹತ್ತರವಾದ ಗೌರವ ಇರುವ ಮಹಾ ಪ್ರಧಾನ ಅರ್ಚಕ ಸ್ಥಾನ( ಪೆರಿಯ ನಂಬಿ) ( ಕೊಡೆಅರ್ಚಕರಾಗಿ ಸೇವೆ ಸಲ್ಲಿಸಲು ಭಾಗ್ಯ ದೊರಕುವುದು ಅಂದ್ರೆ ವೈಕುಂಠದಲ್ಲಿ ದೇವರನ್ನ ಸ್ವತಃ ಪೂಜಿಸಿದ ಗರಿಮೆ.ಈ ಪ್ರಧಾನ ಅರ್ಚಕ ಸ್ಥಾನ ಲಭಿಸಬೇಕಾದರೆ ಅದು ಅದೆಷ್ಟೋ ವರ್ಷ ಕೆಳಗಿನ ಪೂಜಾ ಅರ್ಚಕ ಸ್ಥಾನಗಳನ್ನ ಪೂರೈಸಿ ನಂತರ ಈ ಹುದ್ದೆಯ ಭಾಗ್ಯ ದೊರೆಯುವುದು ವಾಡಿಕೆ. ಅದರಲ್ಲೂ ಮಹಾ ಪ್ರಧಾನ ಅರ್ಚಕರೆಂದರೆ ಅವರಿಗೆ ಸಂಸ್ಥಾನದಿಂದ ನೀಡುವ ಕೊಡೆ ( ಛತ್ರಿ) ಮರ್ಯಾದೆ ಇರುವ ವಿಶೇಷ ಸ್ಥಾನ.ಈ ಮಹಾ ಅರ್ಚಕ ಸ್ಥಾನವನ್ನ ಈವರೆಗೆ ಅತೀ ಸಣ್ಣ ವಯಸ್ಸಿನಲ್ಲಿ ಪಡೆದ ಯಾವುದೇ ನಿದರ್ಶನ ತಿಳಿದಂತೆ ಇಲ್ಲ.
ಕಳೆದ ಆರು ತಿಂಗಳ ಹಿಂದೆ ಇಲ್ಲಿಗೆ ಪ್ರಧಾನ ಅರ್ಚಕರಾಗಿ ನೇರವಾಗಿ ನಿಯುಕ್ತಿಗೊಂಡ ಕೊಕ್ಕಡದ ದಿ. ಸುಬ್ರಾಯ ತೋಡ್ತಿಲ್ಲಾಯರ ಮಗ ಬಡೆಕ್ಕರ ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯ ಯಾನೆ ನಾಗೇಶ ತೋಡ್ತಿಲ್ಲಾಯ (45 ವ). ಇವರಿಗೆ ಅರ್ಚಕರಾಗಿ ಸೇರಿದ ಆರೇ ತಿಂಗಳಲ್ಲಿ ಮಹತ್ತರವಾದ ಗೌರವ ಇರುವ ಮಹಾ ಪ್ರಧಾನ ಅರ್ಚಕ ಸ್ಥಾನ( ಪೆರಿಯ ನಂಬಿ) ( ಕೊಡೆ = ಛತ್ರಿ ಮರ್ಯಾದೆ) ಪ್ರಾಪ್ತಿಯಾಗಿರುವುದು ಇತಿಹಾಸದ ಒಂದು ದೊಡ್ಡ ಮೈಲುಗಲ್ಲು. ಇದರ ಕೀರ್ತಿ ಇವರ ಹುಟ್ಟೂರಾದ ಬೆಳ್ತಂಗಡಿ ತಾಲೂಕಿನ ಕೊಕ್ಕಡಕ್ಕೆ ಮತ್ತು ವಿಶ್ವವಿಖ್ಯಾತ ನಂ.1 ಶ್ರೀಮಂತ ದೇವಳದ ಮಹಾಪ್ರಧಾನ ಅರ್ಚಕ ಹುದ್ದೆಯು ಕೇರಳದ ನೆರೆಯ ಕರ್ನಾಟಕ ರಾಜ್ಯಕ್ಕೂ ಒಂದು ಅತೀ ಹೆಮ್ಮೆಯ ವಿಷಯವಾಗಿದೆ. ಊರಿನ ಓರ್ವ ಅರ್ಚಕರು ಇಂದು ಅತ್ಯಲ್ಪ ಅವಧಿಯಲ್ಲೇ ಇಂತಹ ಮಹಾನ್ ಹುದ್ದೆಗೆ ನಿಯುಕ್ತಿಗೊಂಡಿರುವುದು ನಮ್ಮೂರಿಗೂ ,ನಮ್ಮ ರಾಜ್ಯಕ್ಕೂ ಹೆಮ್ಮೆಯ ವಿಷಯವಾಗಿದೆ. ಇಲ್ಲೀ ತನಕದ ಇತಿಹಾಸದಲ್ಲಿ ಈ ಮಹಾ ಹುದ್ದೆಯನ್ನ ನಿರ್ವಹಿಸಿದವರು ನಮ್ಮೂರಿನ ಹಲವರು ಇದ್ದಾರಾದರೂ ಜೀವನದ ಸಂಧ್ಯಾಕಾಲದಲ್ಲಿ ಈ ಯೋಗ ಅವರಿಗೆಲ್ಲ ಸಿಕ್ಕಿರುವುದಾಗಿದೆ. ಈಗದ ವಿಶೇಷ ಏನೆಂದರೆ ಪ್ರಧಾನ ಅರ್ಚಕ ಸ್ಥಾನಕ್ಕೆ ಸೇರಿದ ಆರುತಿಂಗಳಲ್ಲೇ ಈ ಮಹಾಪ್ರಧಾನ ಅರ್ಚಕ ಸ್ಥಾನ ದ ಸುಯೋಗ ಒದಗಿದ ಅತ್ಯಂತ ಕಿರಿಯ ವಯಸ್ಸಿನ ಮಹಾಪ್ರಧಾನ ಅರ್ಚಕರು( ಪೆರಿಯ ನಂಬಿ) ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯರು ಆಗಿದ್ದಾರೆ.
ಜನವರಿ 30. 2025 ರಂದು ಈ ಮಹಾನ್ ಹುದ್ದೆ ಇವರಿಗೆ ಪ್ರಾಪ್ತವಾಗಲಿದೆ. ಜ. 30ರಿಂದ ಈ ಹಿರಿಯ ಜವಾಬ್ದಾರಿ ಅವರ ಹೆಗಲಿಗೇರಲಿದೆ.

Related posts

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya
error: Content is protected !!