23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ರವರು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಎರಡು ಕೋಟಿ ಹತ್ತು ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಗಾರಿಯ ವಿವರಗಳು :
ತಾಲೂಕಿನ ಬಡಗಕಾರಂದೂರು ಗ್ರಾಮದ ಬೈಲ ಕೊಡಂಗೆ ಬಳಿ ತಡೆಗೋಡೆ ರಚನೆ ಕಾಮಗಾರಿಗೆ 30 ಲಕ್ಷ, ಕುಧ್ಯಾಡಿ ಗ್ರಾಮದ ಪದ್ಮಾಂಜಲಿ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ಗುತ್ತು ಮನೆಯ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ರವಿಪ್ರಭಾ ಮನೆಯ ಬಳಿ ತಡೆಗೋಡೆ ರಚನೆ ಕಾಮಗಾರಿ 25 ಲಕ್ಷ , ನಾರಾವಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಬಳಿ ತಡೆಗೋಡೆ ರಚನೆ 75 ಲಕ್ಷ , ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮೂಡಬೆಟ್ಟು ಬಾಯ್ತರು ಬಳಿ ತಡೆಗೋಡೆ ರಚನೆ 30 ಲಕ್ಷ .

Related posts

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya
error: Content is protected !!