September 6, 2026
Uncategorized

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ರವರು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಎರಡು ಕೋಟಿ ಹತ್ತು ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಗಾರಿಯ ವಿವರಗಳು :
ತಾಲೂಕಿನ ಬಡಗಕಾರಂದೂರು ಗ್ರಾಮದ ಬೈಲ ಕೊಡಂಗೆ ಬಳಿ ತಡೆಗೋಡೆ ರಚನೆ ಕಾಮಗಾರಿಗೆ 30 ಲಕ್ಷ, ಕುಧ್ಯಾಡಿ ಗ್ರಾಮದ ಪದ್ಮಾಂಜಲಿ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ಗುತ್ತು ಮನೆಯ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ರವಿಪ್ರಭಾ ಮನೆಯ ಬಳಿ ತಡೆಗೋಡೆ ರಚನೆ ಕಾಮಗಾರಿ 25 ಲಕ್ಷ , ನಾರಾವಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಬಳಿ ತಡೆಗೋಡೆ ರಚನೆ 75 ಲಕ್ಷ , ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮೂಡಬೆಟ್ಟು ಬಾಯ್ತರು ಬಳಿ ತಡೆಗೋಡೆ ರಚನೆ 30 ಲಕ್ಷ .

Related posts

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya
error: Content is protected !!