23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ರವರು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಎರಡು ಕೋಟಿ ಹತ್ತು ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಗಾರಿಯ ವಿವರಗಳು :
ತಾಲೂಕಿನ ಬಡಗಕಾರಂದೂರು ಗ್ರಾಮದ ಬೈಲ ಕೊಡಂಗೆ ಬಳಿ ತಡೆಗೋಡೆ ರಚನೆ ಕಾಮಗಾರಿಗೆ 30 ಲಕ್ಷ, ಕುಧ್ಯಾಡಿ ಗ್ರಾಮದ ಪದ್ಮಾಂಜಲಿ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ಗುತ್ತು ಮನೆಯ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ರವಿಪ್ರಭಾ ಮನೆಯ ಬಳಿ ತಡೆಗೋಡೆ ರಚನೆ ಕಾಮಗಾರಿ 25 ಲಕ್ಷ , ನಾರಾವಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಬಳಿ ತಡೆಗೋಡೆ ರಚನೆ 75 ಲಕ್ಷ , ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮೂಡಬೆಟ್ಟು ಬಾಯ್ತರು ಬಳಿ ತಡೆಗೋಡೆ ರಚನೆ 30 ಲಕ್ಷ .

Related posts

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya
error: Content is protected !!