25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.1 ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ ನಿರ್ದೇಶಕರ ಸ್ಥಾನ 7ರಿಂದ 9 ಕ್ಕೇರಿದೆ. ಒಟ್ಟು 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ 7 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 3 ಮಂದಿ ಅಭ್ಯರ್ಥಿಗಳು ಈ ಚುನಾಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದು ಜಯ ಸಾಧಿಸಿದ್ದರು. ಆದರೆ ಇಬ್ಬರು ಅಭ್ಯರ್ಥಿಗಳ ಫಲಿತಾಂಶದ ಬಗ್ಗೆ ಹೈಕೋರ್ಟಿನಲ್ಲಿ ರಿಟ್‌ಪಿಟಿಷನ್ ಇದ್ದುದರಿಂದ ಚುನಾವಣಾಧಿಕಾರಿಗಳು ಸಹಕಾರಿ ಸಂಘದ ಚುನಾವಣೆಯ ಫಲಿತಾಂಶವನ್ನು ಘೋಷಣೆ ಮಾಡದೆ ತಡೆ ಹಿಡಿದಿದ್ದರು. ಸಹಕಾರಿ ಸಂಘದ ಎರಡು ಮಹಾಸಭೆಗೆ ಗೈರು ಹಾಜರಾಗುವ ಸಂಘದ ಸದಸ್ಯರಿಗೆ ಸಹಕಾರಿ ಸಂಘದ ನಿಯಮದಂತೆ ಸಂಘದ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇಲ್ಲ.

ಈ ಹಿನ್ನಲೆಯಲ್ಲಿ ಅವಕಾಶ ಕಳೆದುಕೊಂಡ 139 ಮಂದಿ ಸದಸ್ಯರು ಹೈಕೋರ್ಟಿನಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್‌ನಂತೆ ನ್ಯಾಯಾಲಯ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅನುಮತಿ ನೀಡಿ, ಅಂತಿಮ ಆದೇಶವನ್ನು ಕಾಯ್ದಿರಿಸಿತ್ತು. ಮತದಾನಕ್ಕೆ ಅನುಮತಿ ಪಡೆದುಕೊಂಡ 139 ಮಂದಿಯಲ್ಲಿ 100 ಮಂದಿ ಮತ ಚಲಾಯಿಸಿದ್ದು ಅದನ್ನು ಪ್ರತ್ಯೇಕವಾಗಿ ಎಣಿಕೆ ಮಾಡಿ ಇಡಲಾಗಿತ್ತು.


ಇದೀಗ ಹೈಕೋರ್ಟು ಅಂತಿಮ ಆದೇಶವನ್ನು ಮಾಡಿದ್ದು, ಈಗಾಗಲೇ ಕೋರ್ಟಿನಿಂದ ಅನುಮತಿ ಪಡೆದು ಮತ ಚಲಾಯಿಸಿದ ಸದಸ್ಯರ ಮತ ಅಸಿಂಧು ಎಂದು ತೀರ್ಪು ಬಂದಿದೆ ಎನ್ನಲಾಗುತ್ತಿದೆ. ಇದರಿಂದಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಇಬ್ಬರು ನಿರ್ದೆಶಕರು ಚುನಾಯಿತರಾಗಿದ್ದು, ನಿರ್ದೇಶಕರ ಸ್ಥಾನ 7 ರಿಂದ 9 ಕ್ಕೇರಿದೆ. ಹೈಕೋರ್ಟು ನೀಡಿದ ಆದೇಶ ಬಂದ ಕೂಡಲೇ ಚುನಾವಣಾಧಿಕಾರಿಗಳು ಫಲಿತಾಂಶವನ್ನು ಘೋಷಣೆ ಮಾಡಲಿದ್ದಾರೆ.

ಚುನಾಯಿತರಾದ ನಿರ್ದೇಶಕರು: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಬೆಂಬಲಿತ ನಿರ್ದೇಶಕರು ಗೋಪಾಲಕೃಷ್ಣ (716 ಮತ), ಸುರೇಶ್ ಎಸ್ (102 ಮತ), ಮಹಾಬಲ ಕೆ. (696 ಮತ), ಧನಲಕ್ಷ್ಮಿ ಚಂದ್ರಶೇಖರ್ (700 ಮತ), ಕಾಂತಪ್ಪ ಗೌಡ (677 ಮತ), ಕಿಶೋರ್ ಕುಮಾರ್ (740 ಮತ) ಜೋಯಲ್ ಮೆಂಡೋನ್ಸ (617 ಮತ), ಅನಿತಾ ಪ್ರಿಯಾ ಲೋಬೋ (609 ಮತ) ಹಾಗೂ ಗಣೇಶ್ ಮೂಲ್ಯ (614), ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ನಿಕಪೂರ್ವ ಅಧ್ಯಕ್ಷ ಅರವಿಂದ ಜೈನ್ (785 ಮತ), ಪದ್ಮನಾಭ ಸಾಲಿಯಾನ್ ಮಾಲಾಡಿ (627 ಮತ), ಕುಮಾರ ನಾಯ್ಕ (709 ಮತ) ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಪರವಾಗಿ ವಕೀಲ ದೇವಿಪ್ರಸಾದ್ ಶೆಟ್ಟಿ ವಾದಿಸಿದ್ದರು. ನ್ಯಾಯಾಲಯದ ತೀರ್ಪಿನ ವಿರುದ್ಧ ಕಾಂಗ್ರೆಸ್ ಬೆಂಬಲಿತರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

Related posts

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!