September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಾತ್ಯಕ್ಷಿಕೆ ವರ್ತಕರ ಸಂಘ ಬೆಳ್ತಂಗಡಿ ಇವರ ಮುಂದಾಳತ್ವದಲ್ಲಿ ಅಗ್ನಿ ಶಾಮಕದಳ ಸಿಬ್ಬಂದಿಯ ಸಹಯೋಗದಲ್ಲಿ ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ ಪೈ, ಕಾರ್ಯದರ್ಶಿ ಲ್ಯಾನ್ಸಿ ಪಿರೇರಾ ಜೊತೆ ಕಾರ್ಯದರ್ಶಿ ಯಶವಂತ ಪಟ್ಟರ್ಧನ್, ಕೋರ್ ಸಮಿತಿ ಸದಸ್ಯರು ವಿನ್ಸೆಂಟ್ ಡಿಸೋಜ, ಖಜಾಂಚಿ ಸುನಿಲ್ ಪೈ, ಹಾಗೂ ಸದಸ್ಯರು ಶೀತಲ್ ಜೈನ್, ವಿಲ್ಸನ್ ಗೊನ್ಸಾಲ್ವಿಸ್‌ರವರು ಉಪಸ್ಥಿತರಿದ್ದು, ಅಧ್ಯಕ್ಷರು ಅಗ್ನಿಶಾಮಕ ದಳದವರ 24×7 ತೆರೆಮರೆಯ ಜೀವ ಉಳಿಸುವ ಸೇವೆಯನ್ನು ಶ್ಲಾಘಿಸಿದರು.

ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ನೀಲಯ್ಯ ಗೌಡ, ಸಿಬ್ಬಂದಿ ವರ್ಗದವರಾದ ಉಸ್ಮಾನ್, ಲೋಕೇಶ್, ರತನ್ ಕುಮಾರ್, ಶೈಲಾ, ಆದಿಲ್ ಪ್ರಾತ್ಯಕ್ಷಕೆಯಲ್ಲಿ ಭಾಗಿಯಾಗಿದ್ದರು. ಉಸ್ಮಾನ್ ರವರು ವಿವರಾತ್ಮವಾಗಿ ಸ್ಥಳೀಯ ಅನಾಹುತಗಳಾದ ಬಜ್ಜೆ ವಿಮಾನ ದುರಂತ, ವೇಣೂರು ನೀರಿನಲ್ಲಿ ಮುಳುಗಿ ಸಾವು, ಗ್ಯಾಸ್ ದುರಂತಗಳ ಬಗ್ಗೆ ಕಾರಣ ತಿಳಿಸಿ ಹೇಗೆ ಜೀವ ಉಳಿಸಬಹುದಿತ್ತು ಎಂದು ತಿಳಿಸಿದರು. Fire is the best friend Bad Master ಎಂದು ತಿಳಿಸುವ ಮೂಲಕ ಗ್ಯಾಸ್ ಗೀಝರ್ ದುರಂತದ ಬಗ್ಗೆ ಮುಂಜಾಗ್ರತೆ ನೀಡಿ ನಮ್ಮ ವಿದ್ಯಾರ್ಥಿಗಳಿಗೆ ಮುಂಜಾಗ್ರತ ಕ್ರಮಗಳನ್ನು ಪ್ರಾಯೋಗಿಕವಾಗಿ ನೀಡಲು ಅವಕಾಶ ಕಲ್ಪಿಸಿದರು. ಈ ಇಲಾಖೆಗೆ ಸೇರುವ ಅರ್ಹತೆ ತಿಳಿಸಿ ನಿವೃತ್ತಿಯಾದರೂ ಸೇವಾ ತೃಪ್ತಿ ಇದೆ ಯಾಕೆಂದರೆ ಸೇವಾವಧಿಯಲ್ಲಿ ಜೀವಿಗಳನ್ನು ರಕ್ಷಿಸಿದ ಪುಣ್ಯ ಇದೆ ಎಂಬ ಮಾತು ತಿಳಿಸಿದರು.

filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 49;

ಸಂತ ತೆರೇಸಾ ಪ್ರೌಢಶಾಲೆಯ ಸೌಟ್ಸ್ ಮತ್ತು ಗೈಡ್ಸ್ ದಳದ ಸದಸ್ಯರು ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಲೀನಾ ಡಿಸೋಜ ಸ್ವಾಗತಿಸಿದರು. ಸಂತ ತೆರೇಸಾ ಪದವಿ ಪೂರ್ವ ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಗೂ ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಂಡರು. ಶಿಕ್ಷಕಿ ಥಿಯೋಫಿಲಾ ವಂದಿಸಿದರು.

Related posts

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya

ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

Suddi Udaya

ನೂರುಲ್ ಹುದಾ ಮದ್ರಸ ಕನ್ನಡಿಕಟ್ಟೆಯಲ್ಲಿ ವೈಭವದ ‘ಫೈಳಾನ್ 2026 ಮೀಲಾದ್ ಫೆಸ್ಟ್”: ಟೈಗ್ರಿಸ್ ತಂಡ ಚಾಂಪಿಯನ್

Suddi Udaya
error: Content is protected !!