23.4 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2024-2025 ನೇ ಸಾಲಿನ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ಜ.30 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸೇವಾ ಭಾರತಿ ಕನ್ಯಾಡಿ ಇದರ ಸಂಸ್ಥಾಪಕ ವಿನಾಯಕ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮಾರ್ಗದರ್ಶಿ ಅಧಿಕಾರಿಯಾಗಿ ಈರಣ್ಣ ಎಸ್.ಎಚ್, ಕುಮಾರಿ ಫೌಝಿಯಾ ನಗರ ವಿಕಲಚೇತನರ ಸಂಯೋಜಕರು, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಅನಂದ ಅಡಿಲು, ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ವೀರಪ್ಪ ಮೊಯ್ಲಿ, ಶ್ರೀಮತಿ ಹರಿಣಾಕ್ಷಿ, ಬೆಳ್ತಂಗಡಿ ಆರಕ್ಷಕ ಠಾಣೆಯ ಪೊಲೀಸ್ ನಿರೀಕ್ಷಕ ಬಿ.ಜಿ ಸುಬ್ಭಾಪೂರ ಮಠ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವಿಕಲಚೇತನರ 5% ಅನುದಾನದಲ್ಲಿ 5 ಜನರಿಗೆ ಸಹಾಯಧನ, 3 ಜನರಿಗೆ ವಾಟರ್ ಬೆಡ್, ಒಬ್ಬ ವಿಶೇಷಚೇತನರಿಗೆ ಸರ್ಕಾರದ 50 ಸಾವಿರದ ಸಹಾಯಧನದ ಆದೇಶ ಪ್ರತಿ ವಿತರಿಸಲಾಯಿತು.

ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ಸ್ವಾಗತಿಸಿದರು, ಇಂದಬೆಟ್ಟು ವಿಕಲಚೇತನರ ಸಂಯೋಜಕರಾದ ಎಮ್ ಜೆ ಜೋಸೆಫ್ ರವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya
error: Content is protected !!