July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2024-2025 ನೇ ಸಾಲಿನ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ಜ.30 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸೇವಾ ಭಾರತಿ ಕನ್ಯಾಡಿ ಇದರ ಸಂಸ್ಥಾಪಕ ವಿನಾಯಕ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮಾರ್ಗದರ್ಶಿ ಅಧಿಕಾರಿಯಾಗಿ ಈರಣ್ಣ ಎಸ್.ಎಚ್, ಕುಮಾರಿ ಫೌಝಿಯಾ ನಗರ ವಿಕಲಚೇತನರ ಸಂಯೋಜಕರು, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಅನಂದ ಅಡಿಲು, ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ವೀರಪ್ಪ ಮೊಯ್ಲಿ, ಶ್ರೀಮತಿ ಹರಿಣಾಕ್ಷಿ, ಬೆಳ್ತಂಗಡಿ ಆರಕ್ಷಕ ಠಾಣೆಯ ಪೊಲೀಸ್ ನಿರೀಕ್ಷಕ ಬಿ.ಜಿ ಸುಬ್ಭಾಪೂರ ಮಠ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವಿಕಲಚೇತನರ 5% ಅನುದಾನದಲ್ಲಿ 5 ಜನರಿಗೆ ಸಹಾಯಧನ, 3 ಜನರಿಗೆ ವಾಟರ್ ಬೆಡ್, ಒಬ್ಬ ವಿಶೇಷಚೇತನರಿಗೆ ಸರ್ಕಾರದ 50 ಸಾವಿರದ ಸಹಾಯಧನದ ಆದೇಶ ಪ್ರತಿ ವಿತರಿಸಲಾಯಿತು.

ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ಸ್ವಾಗತಿಸಿದರು, ಇಂದಬೆಟ್ಟು ವಿಕಲಚೇತನರ ಸಂಯೋಜಕರಾದ ಎಮ್ ಜೆ ಜೋಸೆಫ್ ರವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!