July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

ಬೆಳ್ತಂಗಡಿ: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಜಿಲ್ಲಾ ಉಪಾಧ್ಯಕ್ಷ ಹಾಗೂ ತಾಲೂಕು ಅಧ್ಯಕ್ಷ ಪ್ರದೀಪ್ ಕುಮಾರ್ ಸಿ ಉಪ ತಹಶೀಲ್ದಾರರ ಮೂಲಕ ಜ.30 ರಂದು ಮನವಿ ಸಲ್ಲಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ರವರುಗಳ ಸರ್ಕಾರದ ಕಾನೂನು/ಸುತ್ತೋಲೆಗಳ ವಿರುದ್ದವಾದ ನಡವಳಿಕೆಗಳು ಹಾಗೂ ನಿಯಮಬಾಹಿರ ಆದೇಶಗಳು ಹಾಗೂ ನಡವಳಿಕೆಗಳ ಕಾರಣದಿಂದಾಗಿ ರಾಜ್ಯಾದ್ಯಂತ ಕಂದಾಯ ಇಲಾಖೆಯ ಆಧಾರ ಸ್ತಂಭವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರದ ಎಲ್ಲಾ ಜನಪರ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ಗೌರವಕ್ಕೆ ಧಕ್ಕೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ವಾತಂತ್ರ್ಯ ಪೂರ್ವದ ಬ್ರಿಟೀಷ್ ಆಳ್ವಿಕೆ ಮಾದರಿಯನ್ನು ಜೀವಂತವಾಗಿರಿಸಿ ದುರಾಡಳಿತ ನಡೆಸುತ್ತಿರುವ ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ರವರನ್ನು ಕೂಡಲೇ ಚಿಕ್ಕಮಗಳೂರು ಜಿಲ್ಲೆಯಿಂದ ವರ್ಗಾಯಿಸಿ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಗೆ ಜಿಲ್ಲಾಧಿಕಾರಿ/ಅಪರ ಜಿಲ್ಲಾಧಿಕಾರಿಯಾಗಿ ಸ್ಥಳನಿಯುಕ್ತಿಗೊಳಿಸದೇ ಸದರಿಯವರು ಮಾಡಿರುವ ಕಾನೂನು ಬಾಹಿರ ಮತ್ತು ಅಧೀನ ನೌಕರ ವಿರೋಧಿ ಆದೇಶಗಳನ್ನು ವಿಚಾರಣೆ ನಡೆಸಿ ಕಾನೂನು ರೀತ್ಯಾ ಕ್ರಮಗಳನ್ನು ಕೈಗೊಂಡು ಈ ವೃಂದದ 9000 ನೌಕರರಿಗೆ ನ್ಯಾಯ ಒದಗಿಸುವಂತೆ ಮನವಿಯಲ್ಲಿ ಕೋರಿದ್ದಾರೆ .ಆದೇಶಗಳ ವಿರುದ್ದವಾಗಿ ತೆಗೆದುಕೊಂಡಿರುವ ಕ್ರಮಗಳನ್ನು ರದ್ದುಪಡಿಸುವವರೆಗೆ ಹಾಗೂ ಇಬ್ಬರನ್ನು ವರ್ಗಾವಣೆ ಮಾಡದಿದ್ದಲ್ಲಿ ಫೆ.03 ರಿಂದ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬಗೆಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ. ತಾಲ್ಲೂಕು ಕಛೇರಿ/ ಜಿಲ್ಲಾಧಿಕಾರಿಗಳ ಕಛೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗುವುದು ಎಂದು ಮನವಿ ಯಲ್ಲಿ ತಿಳಿಸಿದ್ದಾರೆ.

Related posts

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಭೇಟಿ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!