23.3 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಕೊಕ್ಕಡ ಬಡೆಕ್ಕರ ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯರಿಗೆ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಮಹಾ ಪ್ರಧಾನ ಅರ್ಚಕ ಗೌರವ

ಬೆಳ್ತಂಗಡಿ: ಭಾರತದ ಅತೀ ಶ್ರೀಮಂತ ದೇವಸ್ಥಾನ ಕೇರಳದ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪ್ರಧಾನ ಮಹತ್ತರವಾದ ಗೌರವ ಇರುವ ಮಹಾ ಪ್ರಧಾನ ಅರ್ಚಕ ಸ್ಥಾನ( ಪೆರಿಯ ನಂಬಿ) ( ಕೊಡೆಅರ್ಚಕರಾಗಿ ಸೇವೆ ಸಲ್ಲಿಸಲು ಭಾಗ್ಯ ದೊರಕುವುದು ಅಂದ್ರೆ ವೈಕುಂಠದಲ್ಲಿ ದೇವರನ್ನ ಸ್ವತಃ ಪೂಜಿಸಿದ ಗರಿಮೆ.ಈ ಪ್ರಧಾನ ಅರ್ಚಕ ಸ್ಥಾನ ಲಭಿಸಬೇಕಾದರೆ ಅದು ಅದೆಷ್ಟೋ ವರ್ಷ ಕೆಳಗಿನ ಪೂಜಾ ಅರ್ಚಕ ಸ್ಥಾನಗಳನ್ನ ಪೂರೈಸಿ ನಂತರ ಈ ಹುದ್ದೆಯ ಭಾಗ್ಯ ದೊರೆಯುವುದು ವಾಡಿಕೆ. ಅದರಲ್ಲೂ ಮಹಾ ಪ್ರಧಾನ ಅರ್ಚಕರೆಂದರೆ ಅವರಿಗೆ ಸಂಸ್ಥಾನದಿಂದ ನೀಡುವ ಕೊಡೆ ( ಛತ್ರಿ) ಮರ್ಯಾದೆ ಇರುವ ವಿಶೇಷ ಸ್ಥಾನ.ಈ ಮಹಾ ಅರ್ಚಕ ಸ್ಥಾನವನ್ನ ಈವರೆಗೆ ಅತೀ ಸಣ್ಣ ವಯಸ್ಸಿನಲ್ಲಿ ಪಡೆದ ಯಾವುದೇ ನಿದರ್ಶನ ತಿಳಿದಂತೆ ಇಲ್ಲ.
ಕಳೆದ ಆರು ತಿಂಗಳ ಹಿಂದೆ ಇಲ್ಲಿಗೆ ಪ್ರಧಾನ ಅರ್ಚಕರಾಗಿ ನೇರವಾಗಿ ನಿಯುಕ್ತಿಗೊಂಡ ಕೊಕ್ಕಡದ ದಿ. ಸುಬ್ರಾಯ ತೋಡ್ತಿಲ್ಲಾಯರ ಮಗ ಬಡೆಕ್ಕರ ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯ ಯಾನೆ ನಾಗೇಶ ತೋಡ್ತಿಲ್ಲಾಯ (45 ವ). ಇವರಿಗೆ ಅರ್ಚಕರಾಗಿ ಸೇರಿದ ಆರೇ ತಿಂಗಳಲ್ಲಿ ಮಹತ್ತರವಾದ ಗೌರವ ಇರುವ ಮಹಾ ಪ್ರಧಾನ ಅರ್ಚಕ ಸ್ಥಾನ( ಪೆರಿಯ ನಂಬಿ) ( ಕೊಡೆ = ಛತ್ರಿ ಮರ್ಯಾದೆ) ಪ್ರಾಪ್ತಿಯಾಗಿರುವುದು ಇತಿಹಾಸದ ಒಂದು ದೊಡ್ಡ ಮೈಲುಗಲ್ಲು. ಇದರ ಕೀರ್ತಿ ಇವರ ಹುಟ್ಟೂರಾದ ಬೆಳ್ತಂಗಡಿ ತಾಲೂಕಿನ ಕೊಕ್ಕಡಕ್ಕೆ ಮತ್ತು ವಿಶ್ವವಿಖ್ಯಾತ ನಂ.1 ಶ್ರೀಮಂತ ದೇವಳದ ಮಹಾಪ್ರಧಾನ ಅರ್ಚಕ ಹುದ್ದೆಯು ಕೇರಳದ ನೆರೆಯ ಕರ್ನಾಟಕ ರಾಜ್ಯಕ್ಕೂ ಒಂದು ಅತೀ ಹೆಮ್ಮೆಯ ವಿಷಯವಾಗಿದೆ. ಊರಿನ ಓರ್ವ ಅರ್ಚಕರು ಇಂದು ಅತ್ಯಲ್ಪ ಅವಧಿಯಲ್ಲೇ ಇಂತಹ ಮಹಾನ್ ಹುದ್ದೆಗೆ ನಿಯುಕ್ತಿಗೊಂಡಿರುವುದು ನಮ್ಮೂರಿಗೂ ,ನಮ್ಮ ರಾಜ್ಯಕ್ಕೂ ಹೆಮ್ಮೆಯ ವಿಷಯವಾಗಿದೆ. ಇಲ್ಲೀ ತನಕದ ಇತಿಹಾಸದಲ್ಲಿ ಈ ಮಹಾ ಹುದ್ದೆಯನ್ನ ನಿರ್ವಹಿಸಿದವರು ನಮ್ಮೂರಿನ ಹಲವರು ಇದ್ದಾರಾದರೂ ಜೀವನದ ಸಂಧ್ಯಾಕಾಲದಲ್ಲಿ ಈ ಯೋಗ ಅವರಿಗೆಲ್ಲ ಸಿಕ್ಕಿರುವುದಾಗಿದೆ. ಈಗದ ವಿಶೇಷ ಏನೆಂದರೆ ಪ್ರಧಾನ ಅರ್ಚಕ ಸ್ಥಾನಕ್ಕೆ ಸೇರಿದ ಆರುತಿಂಗಳಲ್ಲೇ ಈ ಮಹಾಪ್ರಧಾನ ಅರ್ಚಕ ಸ್ಥಾನ ದ ಸುಯೋಗ ಒದಗಿದ ಅತ್ಯಂತ ಕಿರಿಯ ವಯಸ್ಸಿನ ಮಹಾಪ್ರಧಾನ ಅರ್ಚಕರು( ಪೆರಿಯ ನಂಬಿ) ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯರು ಆಗಿದ್ದಾರೆ.
ಜನವರಿ 30. 2025 ರಂದು ಈ ಮಹಾನ್ ಹುದ್ದೆ ಇವರಿಗೆ ಪ್ರಾಪ್ತವಾಗಲಿದೆ. ಜ. 30ರಿಂದ ಈ ಹಿರಿಯ ಜವಾಬ್ದಾರಿ ಅವರ ಹೆಗಲಿಗೇರಲಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಧಮ೯ಸ್ಥಳಕ್ಕೆ ಧಮ೯ ಸಂರಕ್ಷಣಾ ಪಾದಯಾತ್ರೆ: ಧರ್ಮಪ್ರವಾಹದಲ್ಲಿ ಮಿಂದೆದ್ದ ಜನಸಾಗರ

Suddi Udaya
error: Content is protected !!