September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಜ.31-ಫೆ.1ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಪ್ರಧಾನ ಅರ್ಚಕ ದಿನೇಶ್ ಭಟ್ ಇವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.

ಜ.31ರಂದು ಬೆಳಿಗ್ಗೆ ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ಗಣಪತಿ ದೇವರಿಗೆ ನವಕೆ ಕೆಲಸ, ನಾಗ ದೇವರಿಗೆ ಕಲಶ ಪ್ರಸನ್ನ ಪೂಜೆ, ದೇವರಿಗೆ ಕಲಶಾಭಿಷೇಕ, ಪ್ರತಿಷ್ಠಾ ವಧಂತ್ಯುತ್ಸವ, ಇಂದಬೆಟ್ಟು, ನಾವೂರು, ನಡ, ಕನ್ಯಾಡಿ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ (ಕೈಕಂಬ ಪೇಟೆ ಬಳಿಯಿಂದ), ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಸಂಜೆ ದೇವರ ಉತ್ಸವ ಬಲಿ, ದೇವರಿಗೆ ಅಷ್ಟಾವಧಾನ ಸೇವೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.


ಫೆ.1 ರಂದು ಬೆಳಿಗ್ಗೆ ಗಣಹೋಮ, ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಆಹ್ವಾನಿತ ಭಜನಾ ತಂಡಗಳಿಂದ ಕಮ್ಮಟ ಭಜನೋತ್ಸವ, ರಾತ್ರಿ ರಂಗಪೂಜೆ ನಡೆಯಲಿದೆ.
ರಾತ್ರಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್(ರಿ.) ಇದರ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಶಾಸಕ ಕೆ. ಹರೀಶ್ ಕುಮಾರ್, ಉಜಿರೆ ಶ್ರೀ ಜನಾರ್ದನ ದೇವಸ್ಥಾದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಉಜಿರೆ ಬೆನಕ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‌ನ ಡಾ| ಗೋಪಾಲಕೃಷ್ಣ ಭಟ್, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಡಾ| ಪ್ರದೀಪ್ ಭಾಗವಹಿಸಲಿದ್ದಾರೆ.


ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!