23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಜ.31-ಫೆ.1ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಪ್ರಧಾನ ಅರ್ಚಕ ದಿನೇಶ್ ಭಟ್ ಇವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.

ಜ.31ರಂದು ಬೆಳಿಗ್ಗೆ ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ಗಣಪತಿ ದೇವರಿಗೆ ನವಕೆ ಕೆಲಸ, ನಾಗ ದೇವರಿಗೆ ಕಲಶ ಪ್ರಸನ್ನ ಪೂಜೆ, ದೇವರಿಗೆ ಕಲಶಾಭಿಷೇಕ, ಪ್ರತಿಷ್ಠಾ ವಧಂತ್ಯುತ್ಸವ, ಇಂದಬೆಟ್ಟು, ನಾವೂರು, ನಡ, ಕನ್ಯಾಡಿ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ (ಕೈಕಂಬ ಪೇಟೆ ಬಳಿಯಿಂದ), ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಸಂಜೆ ದೇವರ ಉತ್ಸವ ಬಲಿ, ದೇವರಿಗೆ ಅಷ್ಟಾವಧಾನ ಸೇವೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.


ಫೆ.1 ರಂದು ಬೆಳಿಗ್ಗೆ ಗಣಹೋಮ, ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಆಹ್ವಾನಿತ ಭಜನಾ ತಂಡಗಳಿಂದ ಕಮ್ಮಟ ಭಜನೋತ್ಸವ, ರಾತ್ರಿ ರಂಗಪೂಜೆ ನಡೆಯಲಿದೆ.
ರಾತ್ರಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್(ರಿ.) ಇದರ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಶಾಸಕ ಕೆ. ಹರೀಶ್ ಕುಮಾರ್, ಉಜಿರೆ ಶ್ರೀ ಜನಾರ್ದನ ದೇವಸ್ಥಾದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಉಜಿರೆ ಬೆನಕ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‌ನ ಡಾ| ಗೋಪಾಲಕೃಷ್ಣ ಭಟ್, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಡಾ| ಪ್ರದೀಪ್ ಭಾಗವಹಿಸಲಿದ್ದಾರೆ.


ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

Related posts

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya
error: Content is protected !!