25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ರವರು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಎರಡು ಕೋಟಿ ಹತ್ತು ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಗಾರಿಯ ವಿವರಗಳು :
ತಾಲೂಕಿನ ಬಡಗಕಾರಂದೂರು ಗ್ರಾಮದ ಬೈಲ ಕೊಡಂಗೆ ಬಳಿ ತಡೆಗೋಡೆ ರಚನೆ ಕಾಮಗಾರಿಗೆ 30 ಲಕ್ಷ, ಕುಧ್ಯಾಡಿ ಗ್ರಾಮದ ಪದ್ಮಾಂಜಲಿ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ಗುತ್ತು ಮನೆಯ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ರವಿಪ್ರಭಾ ಮನೆಯ ಬಳಿ ತಡೆಗೋಡೆ ರಚನೆ ಕಾಮಗಾರಿ 25 ಲಕ್ಷ , ನಾರಾವಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಬಳಿ ತಡೆಗೋಡೆ ರಚನೆ 75 ಲಕ್ಷ , ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮೂಡಬೆಟ್ಟು ಬಾಯ್ತರು ಬಳಿ ತಡೆಗೋಡೆ ರಚನೆ 30 ಲಕ್ಷ .

Related posts

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya
error: Content is protected !!