ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

ಮಚ್ಚಿನ: ಮಚ್ಚಿನ ಗ್ರಾಮಕ್ಕೆ ಇಲ್ಲವೇ ಶೌಚಾಲಯದ ಭಾಗ್ಯ.. ಈ ಗ್ರಾಮದಲ್ಲಿ ದೇವಸ್ಥಾನ, ಶಾಲೆ, ಬ್ಯಾಂಕುಗಳು, ಆರೋಗ್ಯ ಕೇಂದ್ರ ಇತರೆ ಎಲ್ಲ ಮೂಲಭೂತ ಸೌಕರ್ಯ ಈ ಗ್ರಾಮದಲ್ಲಿ ಇದ್ದರೂ, ಜನರಿಗೆ ಸಾರ್ವಜನಿಕ ಶೌಚಾಲಯ, ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆ ಮಾತ್ರ ಈ ಗ್ರಾಮದ ಜನರ ಪಾಲಿಗಿಲ್ಲದಂತಾಗಿದೆ.

ನಿರ್ಮಲ ಗ್ರಾಮ ಪುರಸ್ಕೃತಗೊಂಡ ಮಚ್ಚಿನ ಗ್ರಾಮದಲ್ಲಿ ಮನೆಗೊಂದು ಶೌಚಾಲಯ ಇದೆ. ಆದರೆ ಗ್ರಾಮಕ್ಕೊಂದು ಶೌಚಾಲಯ ಇದ್ದರೂ, ಇಲ್ಲದಂತಿರುವ ಸ್ಥಿತಿಯಾಗಿದೆ. ಮಚ್ಚಿನ ಹೃದಯ ಭಾಗದಲ್ಲಿ ಬಹುದೊಡ್ಡ ಶೌಚಾಲಯದ ಕಟ್ಟಡವಿದ್ದರೂ ಉಪಯೋಗಕ್ಕಿಲ್ಲದೆ ನಾರುತ್ತಿದೆ. ಗಿಡಗಂಟಿ ಪೊದೆಗಳಿಂದ ಮುತ್ತಿಹೋಗಿವೆ. ಸಾರಾಯಿ ಬಾಟಲಿಗಳ ರಾಶಿ, ರಾಶಿ ತಾಣವಾಗಿದೆ. ಬಾಗಿಲು ತುಕ್ಕು ಹಿಡಿದು ಹೋಗಿವೆ. ಸರಿಯಾದ ನೀರಿನ ವ್ಯವಸ್ಥೆಗಳೇ ಇಲ್ಲದಂತಾಗಿದೆ. ಪುರುಷರು ಶೌಚಾಲಯಕ್ಕೆ ಅಕ್ಕ ಪಕ್ಕ ಓಡಾಡಿದರೆ, ಮಹಿಳೆಯರು ಎಲ್ಲಿಗೆ ಹೋಗಲಿ ಸ್ವಾಮಿ.. ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಈ ಸಮಸ್ಯೆಯ ಬಗ್ಗೆ ಪತ್ರಿಕೆಯಲ್ಲಿ ಹಲವು ಬಾರಿ ಪ್ರಕಟಗೊಂಡರು ಎಚ್ಚೆತ್ತುಕೊಳ್ಳದೆ ಇರುವುದು ಸಾರ್ವಜನಿಕರಿಗೆ ನಿರಾಶೆಯಾಗಿದೆ. ಅಧಿಕಾರಿಗಳೆ, ಜನಪ್ರತಿನಿಧಿಗಳೇ, ಒಂದು ಸಾರಿ ಈ ಶೌಚಾಲಯ ಬಳಿ ಬಂದು ನೋಡಿ.. ಯಾಕೆ ನಿರ್ಲಕ್ಷ್ಯ… ಸಾರ್ವಜನಿಕರು, ಮಹಿಳೆಯರು, ಆಟೋ ಚಾಲಕರು, ಶೌಚಾಲಯಕ್ಕಾಗಿ ಪೇಟೆ ಬದಿಯಲ್ಲಿ ಇರುವ ಮನೆಗಳಿಗೆ ತೆರಳಿ ಬೇಡುವಂತ ಸ್ಥಿತಿ ನಿರ್ಮಾಣಗೊಂಡಿದೆ.

ಪೇಟೆಯಲ್ಲಿ ಹೆಸರಿಗೊಂದು ಶೌಚಾಲಯ ಕಟ್ಟಡ ಇದೆ ಆದರೆ ಜನರಿಗೆ ಉಪಯೋಗಕ್ಕಿಲ್ಲ, ಈ ಕಟ್ಟಡ ಇದ್ದರೇನು ಇಲ್ಲದಿದ್ದರೇನು ಎನ್ನುತ್ತಾರೆ ಜನರು. ಸಾರ್ವಜನಿಕರಿಗೆ ಕುಡಿಯಲು ನೀರು ಇಲ್ಲ ಹಲವಾರು ಜನರು ಓಡಾಡುವ ಮಚ್ಚಿನ ಪೇಟೆಯಲ್ಲಿ ಇನ್ನಾದರೂ ಒಂದು ಉತ್ತಮ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಈ ಗ್ರಾಮದ ಜನರು ಉಪಯೋಗಿಸುವಂತಾಗಲಿ ಶೌಚಾಲಯದ ನಿರ್ವಹಣೆಗೆ ಜನ ನೇಮಕಗೊಳಿಸಿ, ಜನರಿಗೆ ಒಂದು ಸುಂದರ ಶೌಚಾಲಯ ಮರುಬಳಕೆ ಮಾಡುವಂತೆ. ಕುಡಿಯುವ ನೀರಿನ ವ್ಯವಸ್ಥೆ ಈ ಎಲ್ಲ ಮೂಲಭೂತ ಸೌಕರ್ಯಗಳು ಸಿಗುವಂತಾಗಲಿ ಎನ್ನುತ್ತಾರೆ ಸಾರ್ವಜನಿಕರು.


ವರದಿ: ಹರ್ಷ ಬಳ್ಳಮಂಜ

Related posts

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya
error: Content is protected !!