22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.1 ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ ನಿರ್ದೇಶಕರ ಸ್ಥಾನ 7ರಿಂದ 9 ಕ್ಕೇರಿದೆ. ಒಟ್ಟು 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ 7 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 3 ಮಂದಿ ಅಭ್ಯರ್ಥಿಗಳು ಈ ಚುನಾಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದು ಜಯ ಸಾಧಿಸಿದ್ದರು. ಆದರೆ ಇಬ್ಬರು ಅಭ್ಯರ್ಥಿಗಳ ಫಲಿತಾಂಶದ ಬಗ್ಗೆ ಹೈಕೋರ್ಟಿನಲ್ಲಿ ರಿಟ್‌ಪಿಟಿಷನ್ ಇದ್ದುದರಿಂದ ಚುನಾವಣಾಧಿಕಾರಿಗಳು ಸಹಕಾರಿ ಸಂಘದ ಚುನಾವಣೆಯ ಫಲಿತಾಂಶವನ್ನು ಘೋಷಣೆ ಮಾಡದೆ ತಡೆ ಹಿಡಿದಿದ್ದರು. ಸಹಕಾರಿ ಸಂಘದ ಎರಡು ಮಹಾಸಭೆಗೆ ಗೈರು ಹಾಜರಾಗುವ ಸಂಘದ ಸದಸ್ಯರಿಗೆ ಸಹಕಾರಿ ಸಂಘದ ನಿಯಮದಂತೆ ಸಂಘದ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇಲ್ಲ.

ಈ ಹಿನ್ನಲೆಯಲ್ಲಿ ಅವಕಾಶ ಕಳೆದುಕೊಂಡ 139 ಮಂದಿ ಸದಸ್ಯರು ಹೈಕೋರ್ಟಿನಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್‌ನಂತೆ ನ್ಯಾಯಾಲಯ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅನುಮತಿ ನೀಡಿ, ಅಂತಿಮ ಆದೇಶವನ್ನು ಕಾಯ್ದಿರಿಸಿತ್ತು. ಮತದಾನಕ್ಕೆ ಅನುಮತಿ ಪಡೆದುಕೊಂಡ 139 ಮಂದಿಯಲ್ಲಿ 100 ಮಂದಿ ಮತ ಚಲಾಯಿಸಿದ್ದು ಅದನ್ನು ಪ್ರತ್ಯೇಕವಾಗಿ ಎಣಿಕೆ ಮಾಡಿ ಇಡಲಾಗಿತ್ತು.


ಇದೀಗ ಹೈಕೋರ್ಟು ಅಂತಿಮ ಆದೇಶವನ್ನು ಮಾಡಿದ್ದು, ಈಗಾಗಲೇ ಕೋರ್ಟಿನಿಂದ ಅನುಮತಿ ಪಡೆದು ಮತ ಚಲಾಯಿಸಿದ ಸದಸ್ಯರ ಮತ ಅಸಿಂಧು ಎಂದು ತೀರ್ಪು ಬಂದಿದೆ ಎನ್ನಲಾಗುತ್ತಿದೆ. ಇದರಿಂದಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಇಬ್ಬರು ನಿರ್ದೆಶಕರು ಚುನಾಯಿತರಾಗಿದ್ದು, ನಿರ್ದೇಶಕರ ಸ್ಥಾನ 7 ರಿಂದ 9 ಕ್ಕೇರಿದೆ. ಹೈಕೋರ್ಟು ನೀಡಿದ ಆದೇಶ ಬಂದ ಕೂಡಲೇ ಚುನಾವಣಾಧಿಕಾರಿಗಳು ಫಲಿತಾಂಶವನ್ನು ಘೋಷಣೆ ಮಾಡಲಿದ್ದಾರೆ.

ಚುನಾಯಿತರಾದ ನಿರ್ದೇಶಕರು: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಬೆಂಬಲಿತ ನಿರ್ದೇಶಕರು ಗೋಪಾಲಕೃಷ್ಣ (716 ಮತ), ಸುರೇಶ್ ಎಸ್ (102 ಮತ), ಮಹಾಬಲ ಕೆ. (696 ಮತ), ಧನಲಕ್ಷ್ಮಿ ಚಂದ್ರಶೇಖರ್ (700 ಮತ), ಕಾಂತಪ್ಪ ಗೌಡ (677 ಮತ), ಕಿಶೋರ್ ಕುಮಾರ್ (740 ಮತ) ಜೋಯಲ್ ಮೆಂಡೋನ್ಸ (617 ಮತ), ಅನಿತಾ ಪ್ರಿಯಾ ಲೋಬೋ (609 ಮತ) ಹಾಗೂ ಗಣೇಶ್ ಮೂಲ್ಯ (614), ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ನಿಕಪೂರ್ವ ಅಧ್ಯಕ್ಷ ಅರವಿಂದ ಜೈನ್ (785 ಮತ), ಪದ್ಮನಾಭ ಸಾಲಿಯಾನ್ ಮಾಲಾಡಿ (627 ಮತ), ಕುಮಾರ ನಾಯ್ಕ (709 ಮತ) ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಪರವಾಗಿ ವಕೀಲ ದೇವಿಪ್ರಸಾದ್ ಶೆಟ್ಟಿ ವಾದಿಸಿದ್ದರು. ನ್ಯಾಯಾಲಯದ ತೀರ್ಪಿನ ವಿರುದ್ಧ ಕಾಂಗ್ರೆಸ್ ಬೆಂಬಲಿತರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

Related posts

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!