32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಫೆ.೨ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಬೆಳಗ್ಗೆ 108 ಕಾಯಿ ಗಣಹೋಮ, ಮೂಡಪ್ಪ ಸೇವೆ ಜರಗಲಿರುವುದು.


ಬೆಳಿಗ್ಗೆ 8.೦೦ ಕ್ಕೆ 108 ಕಾಯಿ ಗಣಹೋಮ ಮತ್ತು ಅಥರ್ವಶೀರ್ಷಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪಲ್ಲಪೂಜೆ, ಅನ್ನಸಂತರ್ಪಣೆ, ರಾತ್ರಿ ೭.೦೦ ಕ್ಕೆ ಮೂಡಪ್ಪ ಸೇವೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಂತರ ಅನ್ನ ಸಂತರ್ಪಣೆ ಜರುಗಲಿದೆ.


ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ವಾಮನ್ ನಾಯಕ್ ಉಪ್ಪಿನಂಗಡಿ ರವರ ನೇತೃತ್ವದಲ್ಲಿ ಭಜನಾ ಸೇವೆ, ಸಾಯಂಕಾಲ 5-೦೦ಕ್ಕೆ ಮಂಗಳೂರು ಸುವರ್ಣ ನೃತ್ಯ ತಂಡ ಇವರು ಸೇವಾರ್ಥ “ಭರತನಾಟ್ಯ”, ಸೌತಡ್ಕ ಶಿಶು ಮಂದಿರ ಪುಟಾಣಿಗಳಿಂದ “ಚಿನ್ನರ ಚಿಲಿಪಿಲಿ”, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ “ತುಳುನಾಡ ಗಾನ ಗಂಧರ್ವ” ಬಿರುದಾಂಕಿತ ಶ್ರೀ ಜಗದೀಶ್ ಅಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ, ರಾತ್ರಿ 9.30ರಿಂದ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಮಂಜೇಶ್ವರ ಅಭಿನಯಿಸುವ ತುಳು ಪೌರಾಣಿಕ ಮತ್ತು ಭಕ್ತಿ ಪ್ರಧಾನ ಸಾಮಾಜಿಕ ನಾಟಕ “ಕಲ್ಜಿಗದ ಮಾಯ್ಕಾರೆ ಪಂಜುರ್ಲಿ” ನಡೆಯಲಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya
error: Content is protected !!