July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಫೆ.೨ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಬೆಳಗ್ಗೆ 108 ಕಾಯಿ ಗಣಹೋಮ, ಮೂಡಪ್ಪ ಸೇವೆ ಜರಗಲಿರುವುದು.


ಬೆಳಿಗ್ಗೆ 8.೦೦ ಕ್ಕೆ 108 ಕಾಯಿ ಗಣಹೋಮ ಮತ್ತು ಅಥರ್ವಶೀರ್ಷಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪಲ್ಲಪೂಜೆ, ಅನ್ನಸಂತರ್ಪಣೆ, ರಾತ್ರಿ ೭.೦೦ ಕ್ಕೆ ಮೂಡಪ್ಪ ಸೇವೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಂತರ ಅನ್ನ ಸಂತರ್ಪಣೆ ಜರುಗಲಿದೆ.


ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ವಾಮನ್ ನಾಯಕ್ ಉಪ್ಪಿನಂಗಡಿ ರವರ ನೇತೃತ್ವದಲ್ಲಿ ಭಜನಾ ಸೇವೆ, ಸಾಯಂಕಾಲ 5-೦೦ಕ್ಕೆ ಮಂಗಳೂರು ಸುವರ್ಣ ನೃತ್ಯ ತಂಡ ಇವರು ಸೇವಾರ್ಥ “ಭರತನಾಟ್ಯ”, ಸೌತಡ್ಕ ಶಿಶು ಮಂದಿರ ಪುಟಾಣಿಗಳಿಂದ “ಚಿನ್ನರ ಚಿಲಿಪಿಲಿ”, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ “ತುಳುನಾಡ ಗಾನ ಗಂಧರ್ವ” ಬಿರುದಾಂಕಿತ ಶ್ರೀ ಜಗದೀಶ್ ಅಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ, ರಾತ್ರಿ 9.30ರಿಂದ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಮಂಜೇಶ್ವರ ಅಭಿನಯಿಸುವ ತುಳು ಪೌರಾಣಿಕ ಮತ್ತು ಭಕ್ತಿ ಪ್ರಧಾನ ಸಾಮಾಜಿಕ ನಾಟಕ “ಕಲ್ಜಿಗದ ಮಾಯ್ಕಾರೆ ಪಂಜುರ್ಲಿ” ನಡೆಯಲಿದೆ.

Related posts

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya
error: Content is protected !!