ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಫೆ.೨ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಬೆಳಗ್ಗೆ 108 ಕಾಯಿ ಗಣಹೋಮ, ಮೂಡಪ್ಪ ಸೇವೆ ಜರಗಲಿರುವುದು.


ಬೆಳಿಗ್ಗೆ 8.೦೦ ಕ್ಕೆ 108 ಕಾಯಿ ಗಣಹೋಮ ಮತ್ತು ಅಥರ್ವಶೀರ್ಷಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪಲ್ಲಪೂಜೆ, ಅನ್ನಸಂತರ್ಪಣೆ, ರಾತ್ರಿ ೭.೦೦ ಕ್ಕೆ ಮೂಡಪ್ಪ ಸೇವೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಂತರ ಅನ್ನ ಸಂತರ್ಪಣೆ ಜರುಗಲಿದೆ.


ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ವಾಮನ್ ನಾಯಕ್ ಉಪ್ಪಿನಂಗಡಿ ರವರ ನೇತೃತ್ವದಲ್ಲಿ ಭಜನಾ ಸೇವೆ, ಸಾಯಂಕಾಲ 5-೦೦ಕ್ಕೆ ಮಂಗಳೂರು ಸುವರ್ಣ ನೃತ್ಯ ತಂಡ ಇವರು ಸೇವಾರ್ಥ “ಭರತನಾಟ್ಯ”, ಸೌತಡ್ಕ ಶಿಶು ಮಂದಿರ ಪುಟಾಣಿಗಳಿಂದ “ಚಿನ್ನರ ಚಿಲಿಪಿಲಿ”, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ “ತುಳುನಾಡ ಗಾನ ಗಂಧರ್ವ” ಬಿರುದಾಂಕಿತ ಶ್ರೀ ಜಗದೀಶ್ ಅಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ, ರಾತ್ರಿ 9.30ರಿಂದ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಮಂಜೇಶ್ವರ ಅಭಿನಯಿಸುವ ತುಳು ಪೌರಾಣಿಕ ಮತ್ತು ಭಕ್ತಿ ಪ್ರಧಾನ ಸಾಮಾಜಿಕ ನಾಟಕ “ಕಲ್ಜಿಗದ ಮಾಯ್ಕಾರೆ ಪಂಜುರ್ಲಿ” ನಡೆಯಲಿದೆ.

Related posts

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ಬೆಳ್ತಂಗಡಿ: ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯಿಂದ ಸೂಚನೆ

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya
error: Content is protected !!