22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಜ.31-ಫೆ.1ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಪ್ರಧಾನ ಅರ್ಚಕ ದಿನೇಶ್ ಭಟ್ ಇವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.

ಜ.31ರಂದು ಬೆಳಿಗ್ಗೆ ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ಗಣಪತಿ ದೇವರಿಗೆ ನವಕೆ ಕೆಲಸ, ನಾಗ ದೇವರಿಗೆ ಕಲಶ ಪ್ರಸನ್ನ ಪೂಜೆ, ದೇವರಿಗೆ ಕಲಶಾಭಿಷೇಕ, ಪ್ರತಿಷ್ಠಾ ವಧಂತ್ಯುತ್ಸವ, ಇಂದಬೆಟ್ಟು, ನಾವೂರು, ನಡ, ಕನ್ಯಾಡಿ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ (ಕೈಕಂಬ ಪೇಟೆ ಬಳಿಯಿಂದ), ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಸಂಜೆ ದೇವರ ಉತ್ಸವ ಬಲಿ, ದೇವರಿಗೆ ಅಷ್ಟಾವಧಾನ ಸೇವೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.


ಫೆ.1 ರಂದು ಬೆಳಿಗ್ಗೆ ಗಣಹೋಮ, ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಆಹ್ವಾನಿತ ಭಜನಾ ತಂಡಗಳಿಂದ ಕಮ್ಮಟ ಭಜನೋತ್ಸವ, ರಾತ್ರಿ ರಂಗಪೂಜೆ ನಡೆಯಲಿದೆ.
ರಾತ್ರಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್(ರಿ.) ಇದರ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಶಾಸಕ ಕೆ. ಹರೀಶ್ ಕುಮಾರ್, ಉಜಿರೆ ಶ್ರೀ ಜನಾರ್ದನ ದೇವಸ್ಥಾದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಉಜಿರೆ ಬೆನಕ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‌ನ ಡಾ| ಗೋಪಾಲಕೃಷ್ಣ ಭಟ್, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಡಾ| ಪ್ರದೀಪ್ ಭಾಗವಹಿಸಲಿದ್ದಾರೆ.


ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

Related posts

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!