July 23, 2026
Uncategorized

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ರವರು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಎರಡು ಕೋಟಿ ಹತ್ತು ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಗಾರಿಯ ವಿವರಗಳು :
ತಾಲೂಕಿನ ಬಡಗಕಾರಂದೂರು ಗ್ರಾಮದ ಬೈಲ ಕೊಡಂಗೆ ಬಳಿ ತಡೆಗೋಡೆ ರಚನೆ ಕಾಮಗಾರಿಗೆ 30 ಲಕ್ಷ, ಕುಧ್ಯಾಡಿ ಗ್ರಾಮದ ಪದ್ಮಾಂಜಲಿ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ಗುತ್ತು ಮನೆಯ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ರವಿಪ್ರಭಾ ಮನೆಯ ಬಳಿ ತಡೆಗೋಡೆ ರಚನೆ ಕಾಮಗಾರಿ 25 ಲಕ್ಷ , ನಾರಾವಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಬಳಿ ತಡೆಗೋಡೆ ರಚನೆ 75 ಲಕ್ಷ , ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮೂಡಬೆಟ್ಟು ಬಾಯ್ತರು ಬಳಿ ತಡೆಗೋಡೆ ರಚನೆ 30 ಲಕ್ಷ .

Related posts

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya
error: Content is protected !!