30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

ಇಲಂತಿಲ: 2024 -25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಜ. 30 ರಂದು ಇಲಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರುಗಳ ಸಮ್ಮುಖದಲ್ಲಿ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಗಾಟಿಸಲಾಯಿತು. 2024-25ನೇ ಸಾಲಿನ ವಿಕಲಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ರಾಧಿಕಾ ವಾಚಿಸಿದರು.


ವಿಕಲಚೇತನರಿಗೆ ವಿಕಲಚೇತನ ಇಲಾಖೆ ಹಾಗೂ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸೌಲಭ್ಯದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜ‌ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪಂಚಾಯತಿಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು. ಪ್ರಸಕ್ತ ಸಾಲಿನಲ್ಲಿ ಐದು ಜನ ವಿಕಲಚೇತನರಿಗೆ ವೈದ್ಯಕೀಯ ವೆಚ್ಚದ ಸಹಾಯಧನದ ಚೆಕ್ಕನ್ನು ಹಸ್ತಂತರಿಸಲಾಯಿತು,


ಎರಡು ಜನ ವಿಕಲಚೇತನರಿಗೆ ಕುಡಿಯುವ ನೀರಿನ ಟ್ಯಾಂಕ್ ಖರೀದಿಗೆ ಸಹಾಯಧನದ ಚೆಕ್ ವಿತರಿಸಲಾಯಿತು ಹಾಗೂ ಒಬ್ಬರಿಗೆ ವಿಶೇಷ ಶೌಚಾಲಯ ನಿರ್ಮಾಣಕ್ಕೆ ಸಹಾಯಧನದ ಚೆಕ್‌ ಹಸ್ತಾಂತರಿಸಲಾಯಿತು.


ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ ಹೆಚ್ ಒ ಶ್ರೀಮತಿ ಮಧುಶ್ರೀ ಇವರು ವಿಕಲಚೇತನರಿಗೆ ಹಾಗೂ ಎಂಡೋಪೀಡಿತರಿಗೆ ಆರೋಗ್ಯ ಇಲಾಖೆಯಲ್ಲಿ ಇರುವ ಸೇವೆಯ ಬಗ್ಗೆ ಮಾಹಿತಿಯನ್ನು ನೀಡಿದರು.


ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ನಡೆಸಲಾಯಿತು.
ಪಂಚಾಯತ್ ಕಾರ್ಯದರ್ಶಿ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.

Related posts

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!