September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

ಇಲಂತಿಲ: 2024 -25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಜ. 30 ರಂದು ಇಲಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರುಗಳ ಸಮ್ಮುಖದಲ್ಲಿ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಗಾಟಿಸಲಾಯಿತು. 2024-25ನೇ ಸಾಲಿನ ವಿಕಲಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ರಾಧಿಕಾ ವಾಚಿಸಿದರು.


ವಿಕಲಚೇತನರಿಗೆ ವಿಕಲಚೇತನ ಇಲಾಖೆ ಹಾಗೂ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸೌಲಭ್ಯದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜ‌ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪಂಚಾಯತಿಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು. ಪ್ರಸಕ್ತ ಸಾಲಿನಲ್ಲಿ ಐದು ಜನ ವಿಕಲಚೇತನರಿಗೆ ವೈದ್ಯಕೀಯ ವೆಚ್ಚದ ಸಹಾಯಧನದ ಚೆಕ್ಕನ್ನು ಹಸ್ತಂತರಿಸಲಾಯಿತು,


ಎರಡು ಜನ ವಿಕಲಚೇತನರಿಗೆ ಕುಡಿಯುವ ನೀರಿನ ಟ್ಯಾಂಕ್ ಖರೀದಿಗೆ ಸಹಾಯಧನದ ಚೆಕ್ ವಿತರಿಸಲಾಯಿತು ಹಾಗೂ ಒಬ್ಬರಿಗೆ ವಿಶೇಷ ಶೌಚಾಲಯ ನಿರ್ಮಾಣಕ್ಕೆ ಸಹಾಯಧನದ ಚೆಕ್‌ ಹಸ್ತಾಂತರಿಸಲಾಯಿತು.


ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ ಹೆಚ್ ಒ ಶ್ರೀಮತಿ ಮಧುಶ್ರೀ ಇವರು ವಿಕಲಚೇತನರಿಗೆ ಹಾಗೂ ಎಂಡೋಪೀಡಿತರಿಗೆ ಆರೋಗ್ಯ ಇಲಾಖೆಯಲ್ಲಿ ಇರುವ ಸೇವೆಯ ಬಗ್ಗೆ ಮಾಹಿತಿಯನ್ನು ನೀಡಿದರು.


ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ನಡೆಸಲಾಯಿತು.
ಪಂಚಾಯತ್ ಕಾರ್ಯದರ್ಶಿ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.

Related posts

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!