23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ ಮೂಲಕ ಸಾಧಕರ ಕತೆಗಳನ್ನು ಹೇಳಿ ಆಸಕ್ತಿಯಿಂದ ಹಾಗೂ ಆತ್ಮವಿಶ್ವಾಸದಿಂದ ಪ್ರಯತ್ನಿಸಿ ಮಕ್ಕಳೆˌಖಂಡಿತಾ ನೀವು ಸಾಧಿಸಬಲ್ಲರಿ.ಹಲವಾರು ಕೊರತೆಗಳಿದ್ದರೂ ಲೆಕ್ಕಿಸದೆ ತನ್ನ ಪ್ರಯತ್ನದ ಮೂಲಕ ಸಾಧನೆ ಮಾಡಿದಂತಹ ವ್ಯಕ್ತಿಗಳು ನಮ್ಮ ಕಣ್ಣೆದುರೇ ಇರುವಾಗ ಎಲ್ಲಾ ರೀತೀಯ ಸೌಲಭ್ಯ ಹೊಂದಿರುವ ನೀವು ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಆದರೆ ನಿರಂತರ ಪ್ರಯತ್ನ ಅಗತ್ಯ ಎಂದು ಕಿವಿಮಾತು ಹೇಳಿದರು.


ಶಿಕ್ಷಕಿ ಸವಿತಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಾವಿತ್ರಿ ಸಿ ಡಿ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ಪ್ರಸ್ತಾವಿಸಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ಹೇಮಲತಾ ˌಪ್ರೇಮಲತಾ ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು

Related posts

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya
error: Content is protected !!