July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ ಮೂಲಕ ಸಾಧಕರ ಕತೆಗಳನ್ನು ಹೇಳಿ ಆಸಕ್ತಿಯಿಂದ ಹಾಗೂ ಆತ್ಮವಿಶ್ವಾಸದಿಂದ ಪ್ರಯತ್ನಿಸಿ ಮಕ್ಕಳೆˌಖಂಡಿತಾ ನೀವು ಸಾಧಿಸಬಲ್ಲರಿ.ಹಲವಾರು ಕೊರತೆಗಳಿದ್ದರೂ ಲೆಕ್ಕಿಸದೆ ತನ್ನ ಪ್ರಯತ್ನದ ಮೂಲಕ ಸಾಧನೆ ಮಾಡಿದಂತಹ ವ್ಯಕ್ತಿಗಳು ನಮ್ಮ ಕಣ್ಣೆದುರೇ ಇರುವಾಗ ಎಲ್ಲಾ ರೀತೀಯ ಸೌಲಭ್ಯ ಹೊಂದಿರುವ ನೀವು ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಆದರೆ ನಿರಂತರ ಪ್ರಯತ್ನ ಅಗತ್ಯ ಎಂದು ಕಿವಿಮಾತು ಹೇಳಿದರು.


ಶಿಕ್ಷಕಿ ಸವಿತಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಾವಿತ್ರಿ ಸಿ ಡಿ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ಪ್ರಸ್ತಾವಿಸಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ಹೇಮಲತಾ ˌಪ್ರೇಮಲತಾ ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು

Related posts

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya
error: Content is protected !!