23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಕೊಯ್ಯೂರು : ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ 2023 – 24 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಗ್ರಾಮ ಪಂಚಾಯತ್ ಆವರಣದಲ್ಲಿ ಜ.30 ರಂದು ನಡೆಯಿತು.

ಪಂಚಾಯತ್ ಅಧ್ಯಕ್ಷೆ ದಯಾಮಣಿ‌, ಒಕ್ಕೂಟದ ಅಧ್ಯಕ್ಷೆ ಪ್ರಮೀಳಾ ಪಿ , ಪಂಚಾಯತ್ ಅಭಿವೃದ್ಧಿ ‌ಅಧಿಕಾರಿ ಪ್ರಕಾಶ್ ಎಸ್ , ಪಂಚಾಯತ್ ಉಪಾಧ್ಯಕ್ಷ ಹರೀಶ್ ರವರು ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಎಮ್ ಬಿಕೆ ಶುಭಲಕ್ಷ್ಮಿ ವಾರ್ಷಿಕ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿ, ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕ ಜಯಾನಂದ್ ವಾರ್ಷಿಕ ಮಹಾಸಭೆಯ ಉದ್ದೇಶ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿಯನ್ನು ನೀಡಿದರು. ಒಕ್ಕೂಟದ ಬೆಳಕು‌ ಸಂಜೀವಿನಿ‌ ಸಂಘದ ಸದಸ್ಯೆ ಶ್ರೀಮತಿ ಪುಷ್ಪಾವತಿ ಇವರ ಕಲ್ಪಾಮ್ರತ ಕೊಬ್ಬರಿ‌ ಎಣ್ಣೆಯನ್ನು ಲಾಂಚ್‌‌ ಮಾಡಲಾಯಿತು. ಒಕ್ಕೂಟದಿಂದ ಸಿಐಫ್ ಪಡೆದು ಉತ್ತಮ ಜೀವನನೋಪಾಯ ಚಟುವಟಿಕೆಯನ್ನು ನಡೆಸುವ ಸಂಘದ ಸದಸ್ಯೆ ವಿಜಯ ಹಾಗೂ ಉತ್ತಮ 2 ಸಂಘಗಳನ್ನು‌ ಗುರುತಿಸಿ ಒಕ್ಕೂಟದ ವತಿಯಿಂದ ಸ್ಮರಣಿಕೆ ನೀಡಲಾಯಿತು .

ಈ ಸಂದರ್ಭದಲ್ಲಿ ಸ್ವಚ್ಛತಾ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬಳಿಕ‌ ಪದಗ್ರಹಣವನ್ನು ನಡೆಸಲಾಯಿತು. ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಜಯಾನಂದ್ ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಬೀಳ್ಕೊಟ್ಟ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿ, ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ತರಕಾರಿಗಳು, ಅಕ್ಕಿರೊಟ್ಟಿ, ಚಕ್ಕುಲಿ, ಉಪ್ಪಿನಕಾಯಿ, ಕೊಬ್ಬರಿ‌ ಎಣ್ಣೆಯನ್ನು ಮಾರಾಟ ಮಾಡಲಾಯಿತು. ಶ್ರೀಮತಿ ಶ್ರುತಿ‌ ಸ್ವಾಗತಿಸಿ , ಧನಲಕ್ಷ್ಮಿ ಸಂಘದ ಸದಸ್ಯೆ ಗೀತಾ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!