July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಬ್ರಾಂಚ್ ಸಮಿತಿ ಹಾಗೂ ಜುಮ್ಮಾ ಮಸೀದಿ ಗುರುವಾಯನಕೆರೆ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಕುವೆಟ್ಟು ಗ್ರಾಮದ ಪಣೆಜಾಲುನಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ ಜೋಹಾರ ಪಣೆಜಾಲು ಅವರಿಗೆ ಹಸ್ತಾಂತರ ಮಾಡಲಾಯಿತು.

ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ಕಾಜೂರು ಅವರು ದುವಾ ಆಶಿರ್ವಾದಗೈದರು. ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸದಾತ್ ಬಜತ್ತೂರು ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಮನೆ ನಿರ್ಮಾಣಕ್ಕೆ ಸಹಕರಿಸಿದ ರಿಯಾಝ್ ಮೇಸ್ತ್ರಿ ಮದ್ದಡ್ಕ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜುಮ್ಮಾ ಮಸೀದಿ ಗುರುವಾಯನಕೆರೆ ಖತೀಬರಾದ ಎ ಕೆ ರಝ ಅಮ್ಜದಿ, ಮಸೀದಿ ಅಧ್ಯಕ್ಷ ಅಬ್ದುಲ್ ಲತೀಫ್ ಹಾಜಿ, ಯಾಕೂಬ್ ಮುಸ್ಲಿಯಾರ್, ಹಾಜಿ ಅಬ್ದುಲ್ ರಹಿಮಾನ್ ಸುನ್ನತ್ ಕೆರೆ, ಪಂಚಾಯತ್ ಸದಸ್ಯರಾದ ಮುಸ್ತಾಫ ಜಿ.ಕೆರೆ, ಸುನ್ನತ್ ಕೆರೆ ಜುಮ್ಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ಹಕೀಮ್, ಕಿಲ್ಲೂರು ಜುಮ್ಮಾ ಮಸೀದಿ ಅಧ್ಯಕ್ಷರಾದ ಅಝೀಝ್ ಝುಹ್ರಿ ಉಸ್ತಾದ್, ಉಮರ್ ಮಟನ್, ನಿಸಾರ್ ಕೆ. ಪಿ, ಉಸ್ಮಾನ್ ಬಿ ಬಿ ಎಸ್, ದಾವೂದ್ ಜಿ.ಕೆ, ಕಲಂದರ್ ಬಿ. ಎಚ್, ಅಶ್ರಫ್ ಸುನ್ನತ್ ಕೆರೆ, ನಿಜಾಮ್ ಗೇರುಕಟ್ಟೆ, ಎಸ್‌ಡಿಪಿಐ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya
error: Content is protected !!