April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಿಡ್ಲೆ: ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇದರ 2023-2024ನೇ ವಾರ್ಷಿಕ ಮಹಾಸಭೆಯನ್ನು ನಾಗವೇಣಿ ಅಮ್ಮ ಸಭಾಂಗಣ ಬರೆಂಗಾಯದಲ್ಲಿ ಜ.30ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮ ವಹಿಸಿಕೊಂಡಿದ್ದರು. ಕುಮಾರಿ ಹೇಮಲತಾ ಹಾಗೂ ಶ್ರೀಮತಿ ಪ್ರೇಮ ಇವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಪ್ರಾಸ್ತಾವಿಕ ಮಾತುಗಳನ್ನು ಆಡಿ ಸಭೆಗೆ ಶುಭ ಕೋರಿದರು. ಎಂ ಬಿ ಕೆ ಭವಾನಿ ವಾರ್ಷಿಕ ವರದಿಯನ್ನು ಹಾಗೂ ಜಮಾ ಖರ್ಚು ವರದಿಯನ್ನು ಓದಿ ಸಭೆಯಲ್ಲಿ ಮಂಡಿಸಲಾಯಿತು ಹಾಗೂ ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕಿ ವೀಣಾಶ್ರೀ ವಾರ್ಷಿಕ ಮಹಾಸಭೆಯ ಉದ್ದೇಶ ಜವಾಬ್ದಾರಿ ಹಾಗೂ ಎನ್.ಆರ್.ಎಲ್.ಎಮ್ ನಿಂದ ಸದಸ್ಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಉತ್ತಮ ಸಂಘ, ಸಿಐಎಫ್ ಪಡೆದು ಸ್ವಉದ್ಯೋಗ ಮಾಡುತ್ತಿರುವ ಸದಸ್ಯೆಗೆ ಉತ್ತಮ ಸಾಧಕಿ. ವಿಕಲ ಚೇತನರ ಸಂಘದ ಸದಸ್ಯ ಉತ್ತಮ ಭಾಗವಹಿಸುವಿಕೆ. ಇವರನ್ನು ಗುರುತಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಪದಾಧಿಕಾರಿಗಳ ಆಯ್ಕೆ ಮಾಡಿ ಪದಗ್ರಹಣವನ್ನು ಮಾಡಲಾಯಿತು. ಮಾಜಿ ಸದಸ್ಯರಿಗೆ ಸ್ಮರಣಿಕೆ ನೀಡಲಾಯಿತು. ಶ್ರೀಮತಿ ಹೇಮಾವತಿ ನಿರೂಪಿಸಿ, ಕೃಷಿ ಸಖಿ ಸುಮನ ಸ್ವಾಗತಿಸಿ, ಸುಜಾತಾ ಧನ್ಯವಾದವಿತ್ತರು.

Related posts

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!