25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಿಡ್ಲೆ: ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇದರ 2023-2024ನೇ ವಾರ್ಷಿಕ ಮಹಾಸಭೆಯನ್ನು ನಾಗವೇಣಿ ಅಮ್ಮ ಸಭಾಂಗಣ ಬರೆಂಗಾಯದಲ್ಲಿ ಜ.30ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮ ವಹಿಸಿಕೊಂಡಿದ್ದರು. ಕುಮಾರಿ ಹೇಮಲತಾ ಹಾಗೂ ಶ್ರೀಮತಿ ಪ್ರೇಮ ಇವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಪ್ರಾಸ್ತಾವಿಕ ಮಾತುಗಳನ್ನು ಆಡಿ ಸಭೆಗೆ ಶುಭ ಕೋರಿದರು. ಎಂ ಬಿ ಕೆ ಭವಾನಿ ವಾರ್ಷಿಕ ವರದಿಯನ್ನು ಹಾಗೂ ಜಮಾ ಖರ್ಚು ವರದಿಯನ್ನು ಓದಿ ಸಭೆಯಲ್ಲಿ ಮಂಡಿಸಲಾಯಿತು ಹಾಗೂ ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕಿ ವೀಣಾಶ್ರೀ ವಾರ್ಷಿಕ ಮಹಾಸಭೆಯ ಉದ್ದೇಶ ಜವಾಬ್ದಾರಿ ಹಾಗೂ ಎನ್.ಆರ್.ಎಲ್.ಎಮ್ ನಿಂದ ಸದಸ್ಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಉತ್ತಮ ಸಂಘ, ಸಿಐಎಫ್ ಪಡೆದು ಸ್ವಉದ್ಯೋಗ ಮಾಡುತ್ತಿರುವ ಸದಸ್ಯೆಗೆ ಉತ್ತಮ ಸಾಧಕಿ. ವಿಕಲ ಚೇತನರ ಸಂಘದ ಸದಸ್ಯ ಉತ್ತಮ ಭಾಗವಹಿಸುವಿಕೆ. ಇವರನ್ನು ಗುರುತಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಪದಾಧಿಕಾರಿಗಳ ಆಯ್ಕೆ ಮಾಡಿ ಪದಗ್ರಹಣವನ್ನು ಮಾಡಲಾಯಿತು. ಮಾಜಿ ಸದಸ್ಯರಿಗೆ ಸ್ಮರಣಿಕೆ ನೀಡಲಾಯಿತು. ಶ್ರೀಮತಿ ಹೇಮಾವತಿ ನಿರೂಪಿಸಿ, ಕೃಷಿ ಸಖಿ ಸುಮನ ಸ್ವಾಗತಿಸಿ, ಸುಜಾತಾ ಧನ್ಯವಾದವಿತ್ತರು.

Related posts

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya
error: Content is protected !!